alex Certify ಹೆಚ್.ಡಿ. ಕುಮಾರಸ್ವಾಮಿಗೆ ಬಿಗ್ ಶಾಕ್: ಫಲಿಸದ ರಣತಂತ್ರ – ಜಿಟಿಡಿ ಬಣಕ್ಕೆ ಭರ್ಜರಿ ಜಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್.ಡಿ. ಕುಮಾರಸ್ವಾಮಿಗೆ ಬಿಗ್ ಶಾಕ್: ಫಲಿಸದ ರಣತಂತ್ರ – ಜಿಟಿಡಿ ಬಣಕ್ಕೆ ಭರ್ಜರಿ ಜಯ

ಮೈಸೂರು: ಮೈಸೂರು ಹಾಲು ಉತ್ಪಾದಕರ ಸಹಕಾರ ಒಕ್ಕೂಟ -ಮೈಮುಲ್ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡರ ಬಣ ಭರ್ಜರಿ ಜಯಗಳಿಸಿದೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಸಾರಾ ಮಹೇಶ್ ಅವರ ಬಣಕ್ಕೆ ಭಾರಿ ಹಿನ್ನಡೆಯಾಗಿದೆ. ಜಿ.ಟಿ. ದೇವೇಗೌಡರ ಬಣ ಮತ್ತೆ 5 ವರ್ಷಗಳ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಹೆಚ್.ಡಿ. ರೇವಣ್ಣ ಅವರ ಬಾಮೈದ ಮಧುಚಂದ್ರ ಪರಾಭವಗೊಂಡಿದ್ದಾರೆ. ಹುಣಸೂರು ಉಪ ವಿಭಾಗದ ಎಲ್ಲಾ 8 ಸ್ಥಾನಗಳಲ್ಲಿ ಜಿಟಿಡಿ ಬಣ ಜಯಗಳಿಸಿದೆ.

ಮೈಮುಲ್ ಚುನಾವಣೆಯನ್ನು ಪ್ರತಿಷ್ಠಿತವಾಗಿ ತೆಗೆದುಕೊಂಡಿದ್ದ ಹೆಚ್.ಡಿ. ಕುಮಾರಸ್ವಾಮಿ ಮೈಸೂರಿನಲ್ಲೇ ಉಳಿದುಕೊಂಡು ಮೈಮುಲ್ ನಲ್ಲಿ ಜಿ.ಟಿ. ದೇವೇಗೌಡರ ಬಣದ ವಿರುದ್ಧ ಕಾರ್ಯತಂತ್ರ ರೂಪಿಸಿದ್ದರು. ಆದರೆ, ಅವರಿಗೆ ಭಾರೀ ಹಿನ್ನಡೆಯಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...