alex Certify ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ : ಸಚಿವ ದಿನೇಶ್ ಗುಂಡೂರಾವ್‌ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ : ಸಚಿವ ದಿನೇಶ್ ಗುಂಡೂರಾವ್‌

ಬೆಳಗಾವಿ : ರಾಜ್ಯ ಸರ್ಕಾರವು ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮಕೈಗೊಂಡಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ನಕಲಿ ವೈದ್ಯರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಂತಹವರ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ನಕಲಿ ವೈದ್ಯರಿರುವ ಕಡೆಗಳಲ್ಲಿ ಯಾವುದೇ ಒತ್ತಡಕ್ಕೂ ಮಣಿಯದೆ ಕಠಿಣ ಕ್ರಮಕೈಗೊಳ್ಳುವಂತೆ ಡಿಎಚ್‌ಒ(ಆರೋಗ್ಯ ಅಧಿಕಾರಿಗಳು)ಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೆಲವು ನಾಟಿ ವೈದ್ಯರು, ಪಾರಂಪರಿಕ ಚಿಕಿತ್ಸೆ ನೀಡುವ ವೈದ್ಯರೂ ಇದ್ದಾರೆ. ನಾಟಿ ಚಿಕಿತ್ಸೆ ನೀಡುವ ವೈದ್ಯರಿಗೂ ಸಂಘ ಸಂಸ್ಥೆಗಳು ಇವೆ. ಅವರನ್ನು ಸರ್ಕಾರದಡಿ ನೋಂದಾಯಿಸಿಕೊಳ್ಳಬೇಕೆಂಬ ಬೇಡಿಕೆಯೂ ಇದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...