alex Certify BREAKING : ಸಚಿವ ಕೃಷ್ಣಬೈರೇಗೌಡರ ಪಿಎ ಕಾರು ಡಿಕ್ಕಿ : ಬೈಕ್ ಸವಾರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಚಿವ ಕೃಷ್ಣಬೈರೇಗೌಡರ ಪಿಎ ಕಾರು ಡಿಕ್ಕಿ : ಬೈಕ್ ಸವಾರ ಸಾವು

ಚಿತ್ರದುರ್ಗ : ಸಚಿವಕೃಷ್ಣಬೈರೇಗೌಡರ ಪಿಎ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಮಲ್ಲಾಡಿ ಕ್ರಾಸ್ ಬಳಿ ನಡೆದಿದೆ. 

ಮೃತರನ್ನು ಹೊಳಲ್ಕೆರೆ ತಾಲ್ಲೂಕಿನ ಕುನಗಲಿ ಗ್ರಾಮದ ಬಸವರಾಜಪ್ಪ (45) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಕಡೆಯಿಂದ ಹೊಳಲ್ಕೆರೆ ಮಾರ್ಗವಾಗಿ ಬರುತ್ತಿದ್ದ ಸಚಿವರ ಪಿಎ ಕಾರು ಹೊಳಲ್ಕೆರೆ ಕಡೆಯಿಂದ ಕುನಗಲಿಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಬಸವರಾಜಪ್ಪ ಅವರನ್ನು  ಶಿವಮೊಗ್ಗದ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...