alex Certify ಸಿಎಂ ಪುತ್ರ ವಿಜಯೇಂದ್ರ ಹೆಸರಲ್ಲಿ ವಂಚನೆ, ಸಚಿವ ಶ್ರೀರಾಮುಲು ಪಿಎ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಪುತ್ರ ವಿಜಯೇಂದ್ರ ಹೆಸರಲ್ಲಿ ವಂಚನೆ, ಸಚಿವ ಶ್ರೀರಾಮುಲು ಪಿಎ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿ ಪುತ್ರ ಬಿ.ವೈ. ವಿಜಯೇಂದ್ರ ಮತ್ತು ಸಚಿವ ಬಿ. ಶ್ರೀರಾಮುಲು ಅವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಸಚಿವ ಶ್ರೀರಾಮುಲು ಪಿಎ ರಾಜಣ್ಣನನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಹೆಸರಿನಲ್ಲಿ ಜನರಿಂದ ಕೋಟ್ಯಂತರ ರೂಪಾಯಿ ಹಣ ವಸೂಲು ಮಾಡಿ ರಾಜಣ್ಣ ವಂಚಿಸಿದ್ದಾರೆನ್ನಲಾಗಿದೆ. ಬಳ್ಳಾರಿಯ ರಾಜಣ್ಣ ವಿರುದ್ಧ ವಿಜಯೇಂದ್ರ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿತ್ತು.

ಸಚಿವ ಶ್ರೀರಾಮುಲು ನಿವಾಸದಲ್ಲಿ ತಂಗುತ್ತಿದ್ದ ರಾಜಣ್ಣ ನನಗೆ ವಿಜಯೇಂದ್ರ ಪರಿಚಯ ಎಂದು ಹೇಳಿಕೊಳ್ಳುತ್ತಿದ್ದ. ಕೆಲಸ ಮಾಡಿಸಿಕೊಡುವುದಾಗಿ ಹಲವರಿಂದ ಹಣ ಪಡೆದುಕೊಂಡಿದ್ದ. ಕೆಲಸವಾಗದ ಕಾರಣ ಕೆಲವರು ವಿಜಯೇಂದ್ರ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದರು. ವಿಜಯೇಂದ್ರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ರಾಜಣ್ಣ ಹಲವು ವರ್ಷಗಳಿಂದ ಶ್ರೀರಾಮುಲು ಅವರ ಖಾಸಗಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...