ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಬಿಎಡ್ ಹಾಗೂ ಡಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ಅ.30ರ ವರೆಗೆ ವಿಸ್ತರಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಸೂಚಿಸಲಾದ ದಾಖಲಾತಿಗಳೊಂದಿಗೆ ಅ.30ರೊಳಗಾಗಿ ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ತಾಲ್ಲಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.
ಅರ್ಹತೆಗಳು:
ಅಭ್ಯರ್ಥಿ ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು, ಮುಸ್ಲಿಂ, ಜೈನ್, ಕ್ರಿಶ್ಚಿಯಾನ್ ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು, ಸದರಿ ಕೊರ್ಸ್ಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ(ಗರಿಷ್ಠ 2 ವರ್ಷ) ಅನುದಾನವನ್ನು ನೀಡಲಾಗುತ್ತದೆ, ಸದರಿ ಅಭ್ಯರ್ಥಿಗಳು National Council for teacher Education ಹಾಗೂ Department of State Education Research and Training ಇದರಡಿ ಮಾನ್ಯತೆ ಪಡೆದ ಸರ್ಕಾರಿ/ಅರೆ ಸರ್ಕಾರಿ/ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು, ಅಭ್ಯರ್ಥಿ ಪೋಷಕರ ವಾರ್ಷಿಕ ಆದಾಯ 6 ಲಕ್ಷ ರೂ.ಗಿಂತ ಕಡಿಮೆ ಇರಬೇಕು, ವಿದ್ಯಾರ್ಥಿಗಳು ಬಿಎಡ್ ಹಾಗೂ ಡಿಎಡ್ ಕೋರ್ಸ್ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು, ಈಗಾಗಲೇ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಅರ್ಹರಿರುವುದಿಲ್ಲ, ಸದರಿ ಅಭ್ಯರ್ಥಿಗಳು ಹಿಂದಿನ ಸಾಲಿನಲ್ಲಿ ಕನಿಷ್ಠ ಶೇ.50 ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: ಬಳ್ಳಾರಿಯ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ದೂ.ಸಂ.08392-245755, ಮೊ.ಸಂ.8495887180, ವಿಜಯನಗರ(ಹೊಸಪೇಟೆ) ಮೊ.ಸಂ.8050435366, ಸಂಡೂರು ಮೊ.ಸಂ.8660575061, ಸಿರುಗುಪ್ಪ ಮೊ.ಸಂ.9148889975, ಹಡಗಲಿ ಮೊ.ಸಂ.7353696984, ಹಗರಿಬೊಮ್ಮನಹಳ್ಳಿ ಮೊ.ಸಂ.8494927891, ಕೂಡ್ಲಿಗಿ ಮೊ.ಸಂ.9060330060, ಹರಪನಹಳ್ಳಿ ಮೊ.ಸಂ.9980237242 ಗೆ ಸಂಪರ್ಕಿಸಬಹುದಾಗಿದೆ.