alex Certify ಋಷಿಕುಮಾರ ಸ್ವಾಮಿ ಮುಖಕ್ಕೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರಿಂದ ಮಸಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಋಷಿಕುಮಾರ ಸ್ವಾಮಿ ಮುಖಕ್ಕೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರಿಂದ ಮಸಿ…!

ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಕಾಳಿ ಮಠದ ಋಷಿಕುಮಾರ ಸ್ವಾಮಿ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಆಡಿದ ಮಾತುಗಳು ಕನ್ನಡ ಪರ ಸಂಘಟನೆಯ ಕಾರ್ಯಕರ್ತರನ್ನು ಕೆರಳಿಸಿತ್ತು.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಈ ಸಂದರ್ಶನದ ವಿಡಿಯೋಗೆ ಬಹಳಷ್ಟು ಕಾಮೆಂಟ್ಗಳು ಹರಿದುಬಂದಿದ್ದವು. ಕುವೆಂಪು ಅವರ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಸಾಲನ್ನು ಉದ್ಧರಿಸಿ ಋಷಿಕುಮಾರ ಸ್ವಾಮಿ ಆಡಿದ ಮಾತು ಕೂಡ ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು.

ಇದೀಗ ಗುರುವಾರದಂದು ಋಷಿಕುಮಾರ ಸ್ವಾಮಿ, ಬೆಂಗಳೂರಿನ ಮಲ್ಲೇಶ್ವರದ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಗಳ ಹಲವು ಕಾರ್ಯಕರ್ತರು, ನೀವು ನಾಡಪ್ರಭು ಕೆಂಪೇಗೌಡ ಹಾಗೂ ಕುವೆಂಪು ವಿರುದ್ಧ ಹೇಳಿಕೆ ನೀಡಿದ್ದೀರಿ ಎಂದು ಆರೋಪಿಸಿ ಋಷಿಕುಮಾರ ಸ್ವಾಮಿ ಮುಖಕ್ಕೆ ಮಸಿ ಬಳಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...