alex Certify BIG NEWS : ‘ಉಡುಪಿ ಹತ್ಯೆ ಪ್ರಕರಣ’ ಸಂಭ್ರಮಿಸಿ ಪೋಸ್ಟರ್ ಹರಿಬಿಟ್ಟ ಕಿಡಿಗೇಡಿಗಳು : ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಉಡುಪಿ ಹತ್ಯೆ ಪ್ರಕರಣ’ ಸಂಭ್ರಮಿಸಿ ಪೋಸ್ಟರ್ ಹರಿಬಿಟ್ಟ ಕಿಡಿಗೇಡಿಗಳು : ಕೇಸ್ ದಾಖಲು

ಉಡುಪಿ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಹತ್ಯೆ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳು, ಹೆಂಗಸರು ಎನ್ನದೇ ಬರ್ಬರವಾಗಿ ನಾಲ್ವರನ್ನು ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಲಾಗಿದೆ.

ಇದರ ನಡುವೆ ಕೆಲವು ವಿಕೃತ ಮನಸ್ಸಿನ ಕಿಡಿಗೇಡಿಗಳು ಉಡುಪಿ ಹತ್ಯೆ ಪ್ರಕರಣ’ವನ್ನು ಸಂಭ್ರಮಿಸಿ ಪೋಸ್ಟರ್ ಹರಿಬಿಟ್ಟಿದ್ದಾರೆ.

ಹಿಂದೂ ಮಂತ್ರ ಹೆಸರಿನ ಇನ್ ಸ್ಟಾಗ್ರಾಂ ಹೆಸರಿನಲ್ಲಿ ಪೋಸ್ಟ್ ಮಾಡಲಾಗಿದೆ. ಹತ್ಯೆ ನಡೆಸಿದ ಆರೋಪಿ ಪ್ರವೀಣ್ ಅರುಣ್ ಔಗುಲೆಗೆ ಕಿರೀಟ ತೊಡಿಸಿದಂತೆ ಪೋಸ್ಟರ್ ಮಾಡಿ ಹಾಕಲಾಗಿದೆ. ಅಲ್ಲದೇ 15 ನಿಮಿಷದಲ್ಲಿ ನಾಲ್ವರನ್ನು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ ಎಂದು ಟೈಟಲ್ ಕೊಡಲಾಗಿದೆ. ಸದ್ಯ, ಈ ಇನ್ ಸ್ಟಾಗ್ರಾಂ ಪೇಜ್ ಮೇಲೆ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಒಪ್ಪಿಸುವಂತೆ ನಿನ್ನೆ ಸ್ಥಳೀಯರು ಗಲಾಟೆ ಮಾಡಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.ಉಡುಪಿ ಜಿಲ್ಲೆಯ ತೃಪ್ತಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಸ್ಥಳ ಮಹಜರು ನಡೆಸಲು ನಿನ್ನೆ ನಗರದ ತೃಪ್ತಿ ನಿವಾಸಕ್ಕೆ ಕರೆ ತಂದಿದ್ದರು. ಈ ವೇಳೆ ಸ್ಥಳೀಯರು ಆರೋಪಿ ಪ್ರವೀಣ್ ಚೌಗಲೆಯನ್ನು ತಮಗೆ ಒಪ್ಪಿಸುವಂತೆ ಗಲಾಟೆ ಮಾಡಿದ್ದರು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...