alex Certify ‘ಪ್ಲೀಸ್ ನನ್ನನ್ನು ಬಂಧಿಸಿ’..! ; ‘SIT’ ಅಧಿಕಾರಿಗಳಿಗೆ ಮನವಿ ಮಾಡಿದ ಶಾಸಕ ದದ್ದಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ಲೀಸ್ ನನ್ನನ್ನು ಬಂಧಿಸಿ’..! ; ‘SIT’ ಅಧಿಕಾರಿಗಳಿಗೆ ಮನವಿ ಮಾಡಿದ ಶಾಸಕ ದದ್ದಲ್

ಬೆಂಗಳೂರು : ಎಸ್ಐಟಿ ವಶದಲ್ಲಿರುವ ಶಾಸಕ ಬಸವನಗೌಡ ದದ್ದಲ್ ‘ನನ್ನನ್ನು ಬಂಧಿಸಿ’ ಎಂದು ಎಸ್ ಐ ಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ ಐ ಟಿ ಅಧಿಕಾರಿಗಳ ಎದುರು ಶಾಸಕ ದದ್ದಲ್ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಶಾಸಕ ದದ್ದಲ್ ಅವರು ನನ್ನನ್ನು ಬಂಧಿಸಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇಡಿ ಇಕ್ಕಳದಿಂದ ತಪ್ಪಿಸಿಕೊಳ್ಳಲು ತಮ್ಮನ್ನು ಬಂಧಿಸುವಂತೆ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹೊರಗಡೆ ಬಂದರೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಶಾಸಕ ದದ್ದಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಅವರು ಎಸ್ ಐ ಟಿ ಅಧಿಕಾರಿಗಳಿಗೆ ಈ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋಧಕಾರ್ಯ ನಿನ್ನೆ ರಾತ್ರಿ, ಇಂದು ಮುಂಜಾನೆ ಕೂಡ ಮುಂದುವರಿದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...