alex Certify ಎಫ್ಐಆರ್ ದಾಖಲಾದ ಹಿನ್ನಲೆ: ವಿಚಾರಣೆಗೆ ಹಾಜರಾಗಲು ಶಾಸಕ ಮುನಿರತ್ನಗೆ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಫ್ಐಆರ್ ದಾಖಲಾದ ಹಿನ್ನಲೆ: ವಿಚಾರಣೆಗೆ ಹಾಜರಾಗಲು ಶಾಸಕ ಮುನಿರತ್ನಗೆ ನೋಟಿಸ್

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.

ನೋಟಿಸ್ ತಲುಪಿದ ಮೂರು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಖಾಸಗಿ, ಸರ್ಕಾರಿ ಜಮೀನಿನಲ್ಲಿ ಕಲ್ಲು ತೆಗೆದ ಆರೋಪ ಹಿನ್ನೆಲೆಯಲ್ಲಿ ತಹಶೀಲ್ದಾರ್ ವರದಿಯಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈಗಾಗಲೇ ಉಳಿದ ಮೂವರ ವಿಚಾರಣೆ ನಡೆಸಿರುವ ಪೊಲೀಸರು ಇದೀಗ ವಿಚಾರಣೆಗೆ ಆಗಮಿಸುವಂತೆ ಶಾಸಕ ಮುನಿರತ್ನರಿಗೆ ನೋಟಿಸ್ ನೀಡಿದ್ದಾರೆ. ಇಂದು ಅಥವಾ ನಾಳೆ ಮುನಿರತ್ನ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...