alex Certify ನಾಳೆಯಿಂದ ಜೂ. 13 ರವರೆಗೆ ಮದ್ಯ ನಿಷೇಧ: ಎಂಎಲ್ಸಿ ಎಲೆಕ್ಷನ್ ಹಿನ್ನಲೆಯಲ್ಲಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಜೂ. 13 ರವರೆಗೆ ಮದ್ಯ ನಿಷೇಧ: ಎಂಎಲ್ಸಿ ಎಲೆಕ್ಷನ್ ಹಿನ್ನಲೆಯಲ್ಲಿ ಆದೇಶ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಜೂನ್ 13 ರಂದು ಮತದಾನ ನಡೆಯುವ ಅವಧಿಯನ್ನು ವಿಸ್ತರಿಸಿರುವ ಹಿನ್ನೆಲೆಯಲ್ಲಿ ಶುಷ್ಕ ದಿನದ ಅವಧಿಯನ್ನು ಪರಿಷ್ಕರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಜೂನ್ 11 ರ ಸಂಜೆ 5 ಗಂಟೆಯಿಂದ ಜೂನ್ 13 ರ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯಪಾನ, ಮದ್ಯ ಮಾರಾಟ ಹಾಗೂ ಸಾಗಾಣೆಯನ್ನು ನಿಷೇಧಿಸಲಾಗಿದೆ. ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಹಾಗೂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಈ ತಿದ್ದುಪಡಿ ಆದೇಶ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...