alex Certify ಭೀಕರ ಅಪಘಾತ: KSRTC ಬಸ್​ ಹರಿದು ತಾಯಿ ಹಾಗೂ 1 ವರ್ಷದ ಕಂದಮ್ಮ ದಾರುಣ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ: KSRTC ಬಸ್​ ಹರಿದು ತಾಯಿ ಹಾಗೂ 1 ವರ್ಷದ ಕಂದಮ್ಮ ದಾರುಣ ಸಾವು

KSRTC ಬಸ್​ ಹರಿದ ಪರಿಣಾಮ ತಾಯಿ ಹಾಗೂ ಪುಟ್ಟ ಕಂದಮ್ಮ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ಸಂಭವಿಸಿದೆ. ಚಾಲಕನ ಅತಿ ವೇಗದ ಚಾಲನೆಯೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

ಮೃತ ಮಹಿಳೆಯನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಸಿದ್ದೀಕ್​ ಎಂಬವರ ಪತ್ನಿ 25 ವರ್ಷದ ಶಾಹಿದಾ ಎಂದು ಗುರುತಿಸಲಾಗಿದೆ. ಈ ಮಹಿಳೆಯ ಪುತ್ರ 1 ವರ್ಷದ ಶಾಹೀಲ್​ ಕೂಡ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ. ಗೇರುಕಟ್ಟೆಯಲ್ಲಿರುವ ತವರು ಮನೆಗೆ ಬಂದಿದ್ದ ಶಾಹಿದಾ ಮಗುವನ್ನು ಕರೆದುಕೊಂಡು ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಸ್​ ನಿಲ್ದಾಣದ ಪ್ರವೇಶ ದ್ವಾರದ ಸಮೀಪದಲ್ಲೇ ಬಸ್​ ಡಿಕ್ಕಿ ಹೊಡೆದಿದೆ. ಚಾಲಕನ ಸೀಟಿನ ಕೆಳಗಿರುವ ಚಕ್ರದಡಿಗೆ ತಾಯಿ – ಮಗು ಸಿಲುಕಿದ್ದಾರೆ ಎನ್ನಲಾಗಿದೆ.

ರಿಲಾಯನ್ಸ್ ರಸಪ್ರಶ್ನೆಯಲ್ಲಿ ಪಾಲ್ಗೊಳ್ಳಿ, ಪಡೆಯಿರಿ ಉಚಿತ ಡೇಟಾ

ತಾಯಿ – ಮಗು ಅಪಘಾತಕ್ಕೀಡಾಗುತ್ತಿದ್ದಂತೆಯೇ ಬಸ್​ ನಿಲ್ಲಿಸುವಂತೆ ಸಾರ್ವಜನಿಕರು ಚಾಲಕನಿಗೆ ಹೇಳಿದ್ದಾರೆ. ಆದರೆ ಇದ್ಯಾವುದರ ಪರಿವೆ ಇಲ್ಲದಂತೆ ಇದ್ದ ಚಾಲಕ ಬಸ್​ ಚಲಾಯಿಸುವುದರಲ್ಲೇ ಮಗ್ನನಾಗಿದ್ದು ಪರಿಣಾಮ ಹಿಂಬದಿಯ ಚಕ್ರವೂ ತಾಯಿ ಮಗುವಿನ ಮೇಲೆ ಹರಿದಿದೆ. ಮಗು ಹಾಗೂ ಮಹಿಳೆಯ ತಲೆಯ ಮೇಲೆಯೇ ಬಸ್​ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...