alex Certify SHOCKING NEWS: ತಾಯಿಯ ಶವದ ಜೊತೆ 3-4 ದಿನ ಕಳೆದಿದ್ದ ಬುದ್ಧಿಮಾಂದ್ಯ ಮಗಳೂ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ತಾಯಿಯ ಶವದ ಜೊತೆ 3-4 ದಿನ ಕಳೆದಿದ್ದ ಬುದ್ಧಿಮಾಂದ್ಯ ಮಗಳೂ ಸಾವು

ಉಡುಪಿ: ತಾಯಿಯ ಶವದ ಜೊತೆ 3-4 ದಿನ ಅನ್ನ, ನೀರಿಲ್ಲದೇ ಕಳೆದಿದ್ದ ಬುದ್ಧಿಮಾಂದ್ಯ ಮಗಳು ಕೂಡ ಸಾವನ್ನಪ್ಪಿರುವ ಮನಕಲಕುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನವಾಡಿಯಲ್ಲಿ ಈ ಘಟನೆ ನಡೆದಿದೆ. ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (30) ಮೃತ ದುರ್ದೈವಿಗಳು.

ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿರುವ ತಾಯಿ ಜಯಂತಿ ಶೆಟ್ಟಿ 3-4 ದಿನಗಳ ಹಿಂದೆ ಮನೆಯಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಗಳು ಪ್ರಗತಿ ಶೆಟ್ಟಿಯನ್ನು ರಕ್ಷಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ಕೋಟೇಶ್ವರ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಚಿಕಿತ್ಸೆ ಫಲಿಸದೇ ಮಗಳು ಸಾವನ್ನಪ್ಪಿದ್ದಾರೆ. ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...