alex Certify ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ತುಮಕೂರು: ಬುದ್ಧಿವಾದ ಹೇಳಿದ ತಾಯಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಕುಣಿಗಲ್ ತಾಲೂಕು ಹಂಗರಹಳ್ಳಿ ನಿವಾಸಿ ವಿರೂಪಾಕ್ಷ ಎಂಬಾತ ಶಿಕ್ಷಗೆ ಒಳಗಾದ ವ್ಯಕ್ತಿ. ತಾಯಿ ಜಯಮ್ಮ ಬುದ್ಧಿವಾದ ಹೇಳಿದ್ದಕ್ಕೆ 2021ರ ಜನವರಿ 15ರಂದು ರಾತ್ರಿ ಕೊಲೆ ಮಾಡಿದ್ದ. ಕೆಲಸ ಮಾಡದೆ ಮನೆಯಲ್ಲಿ ಇರುತ್ತಿದ್ದ ವಿರೂಪಾಕ್ಷ ಹಣಕ್ಕಾಗಿ ಪದೇಪದೇ ತಾಯಿಯನ್ನು ಪೀಡಿಸುತ್ತಿದ್ದ. ಹಣ ಕೊಡದಿದ್ದಾಗ ಗಲಾಟೆ ಮಾಡುತ್ತಿದ್ದ. ಹಣ ನೀಡಲು ನಿರಾಕರಿಸಿದ ಜಯಮ್ಮ ಬುದ್ಧಿವಾದ ಹೇಳಿದ್ದರು.

ಅಂದು ರಾತ್ರಿ ಜಯಮ್ಮ ಮಲಗಿದ್ದ ವೇಳೆ ತಲೆ ಮೇಲೆ ಕಾರ ಅರೆಯುವ ಗುಂಡುಕಲ್ಲು ಎತ್ತಿ ಹಾಕಿ ವಿರೂಪಾಕ್ಷ ಕೊಲೆ ಮಾಡಿದ್ದ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಅಂದಿನ ಸಿಪಿಐ ಗುರುಪ್ರಸಾದ್ ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...