alex Certify ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದ ಹಲವೆಡೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅಪಾರ ನಗದು ವಶಕ್ಕೆ ಪಡೆಯಲಾಗಿದೆ.

ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ನಗದು ವಶಕ್ಕೆ:.ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆಯಲಾಗಿದೆ. ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ, ಎಸ್.ಎಸ್.ಟಿ. ಹಾಗೂ ಎಫ್.ಎಸ್.ಟಿ. 3 ರ ನಾಗಾನಾಯ್ಕ, ಪೋಲೀಸ್ ಸಿಬ್ಬಂದಿ ತಡೆದು ತಪಾಸಣೆ ಮಾಡಿದಾಗ ಕಾರ್ ನಲ್ಲಿ ಓಂಪ್ರಕಾಶ್ ಎನ್ನುವವರಿಗೆ ಸೇರಿದ್ದ ದಾಖಲೆ ಇರದ 3.82 ಲಕ್ಷ ರೂ. ನಗದು ಇರುವುದು ಕಂಡುಬಂದಿದೆ.

ನಿಯಮಾನುಸಾರ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಆಗಿರುವ ಹು-ಧಾ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದ್ದಾರೆ.

ಎಂಸಿಸಿ ನೋಡೆಲ್ ಅಧಿಕಾರಿ ರವೀಂದ್ರ ಕುಮಾರ್, ಪೋಲೀಸ್ ಇನ್ಸ್ಪೆಕ್ಟರ್ ಕಿರಣ್ ಕುಮಾರ, ಎಎಸ್ಐ ಆರ್.ಜಿ. ನಾಯ್ಕ, ಎಎಸ್ಐ ಜಿ.ಸಿ. ಕಡೇಮನಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ವಶಪಡಿಸಿಕೊಂಡಿರುವ ದಾಖಲೆ ಇಲ್ಲದ ಹಣವನ್ನು ಖಜಾನೆಯಲ್ಲಿ ಡಿಪಾಸಿಟ್ ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ಜಿಲ್ಲಾ ಸೀಜರ್ ಕಮಿಟಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...