alex Certify ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ ಕುಮಾರಸ್ವಾಮಿ, ಇನ್ಸ್ ಪೆಕ್ಟರ್ ಗೆ ಧಮಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ ಕುಮಾರಸ್ವಾಮಿ, ಇನ್ಸ್ ಪೆಕ್ಟರ್ ಗೆ ಧಮಕಿ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಹೊಸದಾಗಿ ಚಾರ್ಜ್ ತೆಗೆದುಕೊಂಡಿದ್ದ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಮಲ್ಲಂದೂರು ಠಾಣೆಯ ಇನ್ಸ್ ಪೆಕ್ಟರ್ ರವೀಶ್ ಅವರಿಗೆ ಆವಾಜ್ ಹಾಕಿದ ಕುಮಾರಸ್ವಾಮಿ, ಯಾರನ್ನು ಕೇಳಿ ಚಾರ್ಜ್ ತೆಗೆದುಕೊಂಡೆ ಎಂದು ಫೋನ್ ಮಾಡಿ ಧಮಕಿ ಹಾಕಿದ್ದಾರೆ. ಎಲ್ಲಿದ್ದೀಯಾ? ನಿನ್ನನ್ನು ಇಲ್ಲಿಗೆ ಬರಬೇಡ ಎಂದು ಹೇಳಿದ್ದೆ ತಾನೇ? ಠಾಣೆಯಲ್ಲಿ ಇರಬೇಡ, ವಾಪಸ್ ಹೋಗು. ಮರ್ಯಾದೆಯಿಂದ ವಾಪಸ್ ಹೋಗಲೇ ಎಂದು ಧಮಕಿ ಹಾಕಿದ್ದಾರೆ.

ಬಂದ ರೀತಿಯಲ್ಲೇ ವಾಪಸ್ ಹೋಗಬೇಕೆಂದು ಅವಾಜ್ ಹಾಕಿದ್ದು, ಐಜಿಪಿ ಅವರಿಗೆ ಎಷ್ಟು ಲಂಚ ಕೊಟ್ಟಿದ್ದೀಯಾ? ಯಾವನು ಐಜಿಪಿ? ಮೂಡಿಗೆರೆಗೆ ಎಲ್ಲಾ ನಾನೇ. ನನ್ನನ್ನು ನೋಡಲು ಬಂದರೆ ಒದ್ದು ಓಡಿಸುತ್ತೇನೆ ಎಂದು ಧಮಕಿ ಹಾಕಿದ್ದಾರೆನ್ನಲಾಗಿದ್ದು, ಈ ವಿಚಾರವೀಗ ಭಾರೀ ಚರ್ಚೆಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...