alex Certify ಮನೆ ನಿರ್ಮಿಸಿಕೊಡಲು 50 ರೂ. ಕೂಡ ಪಡೆದಿಲ್ಲ: ಭ್ರಷ್ಟಾಚಾರ ಆರೋಪಕ್ಕೆ ರೇಣುಕಾಚಾರ್ಯ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ನಿರ್ಮಿಸಿಕೊಡಲು 50 ರೂ. ಕೂಡ ಪಡೆದಿಲ್ಲ: ಭ್ರಷ್ಟಾಚಾರ ಆರೋಪಕ್ಕೆ ರೇಣುಕಾಚಾರ್ಯ ತಿರುಗೇಟು

ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಅವರ ಸಹೋದರರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದ್ದು, ಇದಕ್ಕೆ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.

ನನ್ನ ಕ್ಷೇತ್ರದಲ್ಲಿ ಮನೆ ನಿರ್ಮಿಸಿ ಕೊಡಲು 50 ರೂ.ಕೂಡ ಪಡೆದಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಶಾಸಕ ಶಾಂತನಗೌಡ ಈ ರೀತಿ ಆರೋಪ ಮಾಡುತ್ತಿದ್ದಾರೆ. ಜನ ಈಗಾಗಲೇ ಮೂರು ಬಾರಿ ಶಾಂತನಗೌಡರನ್ನು ಸೋಲಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾನು ಮತ್ತೆ ಗೆಲ್ಲುವುದು ನಿಶ್ಚಿತ ಎಂದು ಹೊನ್ನಾಳಿಯಲ್ಲಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ರೇಣುಕಾಚಾರ್ಯ ಮತ್ತು ಅವರ ಸಹೋದರರಿಗೆ ಹಣ ನೀಡಬೇಕಿದೆ. ರೇಣುಕಾಚಾರ್ಯ ಅವರು ಭ್ರಷ್ಟಾಚಾರ ಮಾಡಿಲ್ಲವೆಂದಾದರೆ ಮಾರಿಕೊಪ್ಪ ದೇವಾಲಯಕ್ಕೆ ಬಂದು ಆಣೆ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ಸುರೇಂದ್ರ ಗೌಡ ಸವಾಲು ಹಾಕಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...