alex Certify ಸಿಎಂ ಬೊಮ್ಮಾಯಿ ಸರ್ಕಾರದಲ್ಲೂ BSY ಆಪ್ತರಿಗೆ ಚಾನ್ಸ್: ರೇಣುಕಾಚಾರ್ಯ, ಜೀವರಾಜ್ ಗೆ ಸಂಪುಟ ದರ್ಜೆ ಸ್ಥಾನ ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಬೊಮ್ಮಾಯಿ ಸರ್ಕಾರದಲ್ಲೂ BSY ಆಪ್ತರಿಗೆ ಚಾನ್ಸ್: ರೇಣುಕಾಚಾರ್ಯ, ಜೀವರಾಜ್ ಗೆ ಸಂಪುಟ ದರ್ಜೆ ಸ್ಥಾನ ಮಾನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರನ್ನು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿಯೂ ಮುಂದುವರೆಸಲಾಗಿದೆ.

ಇಬ್ಬರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಜೀವರಾಜ್ ಅವರನ್ನು ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿ, ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಇವರು ರಾಜಕೀಯ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದರು. ಈಗ ಬೊಮ್ಮಾಯಿ ಸರ್ಕಾರದಲ್ಲಿಯೂ ಬಿಎಸ್ವೈ ಆಪ್ತರನ್ನು ಮುಂದುವರೆಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...