alex Certify ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಎಂಎಸ್ಐಎಲ್ ಮಳಿಗೆ ತೆರೆಯಲು ಅಡ್ಡಿಯಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಎಂಎಸ್ಐಎಲ್ ಮಳಿಗೆ ತೆರೆಯಲು ಅಡ್ಡಿಯಿಲ್ಲ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಯಾವುದೇ ಅಡ್ಡಿ ಇಲ್ಲವೆಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಮದ್ಯ ವಹಿವಾಟು ಪರವಾನಿಗೆ ನೀಡುವುದಿಲ್ಲ. ಆ ಬಗ್ಗೆ ಯೋಚನೆ ಮಾಡಿಲ್ಲ. ಹಿಂಬಾಕಿ ಪ್ರಕರಣಗಳ ಇತ್ಯರ್ಥಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಹೊಸ ಎಂಎಸ್ಐಎಲ್ ಮಳಿಗೆ ತೆರೆಯಲು ಅಡ್ಡಿ ಇಲ್ಲ. ಅಮಾನತಿನಲ್ಲಿ ಇಟ್ಟಿದ್ದ ನವೀಕರಣಕ್ಕೆ ಬಾಕಿ ಇರುವ ಪ್ರಕರಣಗಳನ್ನು ಕ್ಲಿಯರ್ ಮಾಡಿ ಮಂಜೂರು ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...