alex Certify ಮುಸ್ಲಿಂ ಸಮುದಾಯದ ಬಗ್ಗೆ ಹೇಳಿಕೆ: ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಸ್ಲಿಂ ಸಮುದಾಯದ ಬಗ್ಗೆ ಹೇಳಿಕೆ: ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಪ್ರತಿಭಟನೆ

ಬೆಂಗಳೂರು: ಮುಸ್ಲಿಮರ ವಿರುದ್ಧ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಅವರ ಹೇಳಿಕೆ ವಿರೋಧಿಸಿ ಜಾಮಿಯಾ ಮಸೀದಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಜೂನ್ 10 ರಂದು ಹೊಸಕೋಟೆ ನಗರದ ಕನಕ ಭವನದಲ್ಲಿ ನಡೆದ ಸೋಲಿನ ಆತ್ಮವಲೋಕನ ಸಭೆಯಲ್ಲಿ ಎಂಟಿಬಿ ನಾಗರಾಜ್ ಮುಸ್ಲಿಮರು ಮತ ಹಾಕದಿರುವುದಕ್ಕೆ ನನಗೆ ಸೋಲಾಯಿತು. ಬಿಜೆಪಿ ನೋಟು, ಕಾಂಗ್ರೆಸ್ ಗೆ ವೋಟು. ಅಲ್ಲಾ, ಕುರಾನ್ ಮೇಲೆ ಆಣೆ ಪ್ರಮಾಣ ಮಾಡಿ, ನನಗೆ ವೋಟ್ ಹಾಕಿಲ್ಲ. ಇನ್ನು ಮೇಲೆ ನಿಮಗೆ ಕೇರ್ ಮಾಡಲ್ಲ. ನಂಬಿಸಿ ಹಣ ಪಡೆದು ನನಗೆ ಮೋಸ ಮಾಡಿದ್ದಾರೆ ಎಂದು ಎಂಟಿಬಿ ಹೇಳಿದ್ದರೆನ್ನಲಾಗಿದೆ.

ಅವರ ಹೇಳಿಕೆ ವಿರುದ್ಧ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲಿ? ಯಾರಿಗೆ? ಹೇಗೆ ಹಣ ಕೊಟ್ಟಿದ್ದಾರೆ ಎಂದು ಎಂಟಿಬಿ ನಾಗರಾಜ್ ಹೇಳಲಿ. ಕೂಡಲೇ ಕ್ಷಮೆ ಕೇಳಲಿ ಒತ್ತಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...