alex Certify BREAKING : CM ಸಿದ್ದರಾಮಯ್ಯಗೆ ‘ಮುಡಾ’ ಸಂಕಷ್ಟ : ಸೋಮವಾರದಿಂದ ‘ಲೋಕಾಯುಕ್ತ’ ತನಿಖೆ ಆರಂಭ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : CM ಸಿದ್ದರಾಮಯ್ಯಗೆ ‘ಮುಡಾ’ ಸಂಕಷ್ಟ : ಸೋಮವಾರದಿಂದ ‘ಲೋಕಾಯುಕ್ತ’ ತನಿಖೆ ಆರಂಭ.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆ ಆರಂಭವಾಗಲಿದೆ.

ಇಂದು ಕಚೇರಿ ಕೆಲಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಗ್ನರಾಗಲಿದ್ದು, ನಾಳೆ ಭಾನುವಾರ ಆದ್ದರಿದ 2 ದಿನ ಬಿಟ್ಟು ಸೋಮವಾರದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆ ಆರಂಭವಾಗಲಿದೆ.

‘ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ  ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದ್ದು, ಅಂತೆಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ.

ಲೋಕಾಯುಕ್ತ ಎಸ್ ಪಿ ಉದೇಶ್ ಅವರು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸೋಮವಾರದಿಂದ ತನಿಖೆ ಆರಂಭಿಸಲಿದ್ದು, ಈ ಮೂಲಕ ಸಿಎಂ ಗೆ ಸಂಕಟ ಶುರುವಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...