alex Certify BIG BREAKING NEWS: ರಿಲಯನ್ಸ್‌ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್‌ ಅಂಬಾನಿ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಿಲಯನ್ಸ್‌ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್‌ ಅಂಬಾನಿ ರಾಜೀನಾಮೆ

ರಿಲಯನ್ಸ್‌ ಜಿಯೋ ಇನ್ಫೋಕಾಂ ನಿರ್ದೇಶಕ ಸ್ಥಾನಕ್ಕೆ ರಿಲಯನ್ಸ್‌ ಇಂಡಸ್ಟ್ರೀಸ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ ಮುಕೇಶ್‌ ಅಂಬಾನಿ ರಾಜೀನಾಮೆ ನೀಡಿದ್ದಾರೆ. ಅವರ ಪುತ್ರ ಆಕಾಶ್‌ ಅಂಬಾನಿ ರಿಲಯನ್ಸ್‌ ಜಿಯೋ ಚೇರ್ಮನ್‌ ಆಗಿ ಕಾರ್ಯ ನಿರ್ವಹಿಸಲಿದ್ದು, ಇದು ಜೂನ್‌ 27 ರಿಂದಲೇ ಜಾರಿಗೆ ಬಂದಿದೆ.

ಈ ಕುರಿತ ಪ್ರಕಟಣೆ ಇಂದು ಹೊರ ಬಿದ್ದಿದ್ದು, ಅಕಾಶ್‌ ಅಂಬಾನಿಯವರು ರಿಲಯನ್ಸ್‌ ಜಿಯೋ ಇನ್ಫೋಕಾಂ ನ ಕಾರ್ಯಕಾರಿ ನಿರ್ದೇಶಕ ಮಂಡಳಿಯ ಚೇರ್ಮನ್‌ ಆಗಿ ಮುಂದುವರೆಯಲಿದ್ದಾರೆ ಎಂದು ತಿಳಿಸಲಾಗಿದೆ.

ಪಂಕಜ್‌ ಮೋಹನ್‌ ಪವಾರ್‌ ಅವರು ಕಂಪನಿಯ ಮ್ಯಾನೇಜಿಂಗ್‌ ಡೈರೆಕ್ಟರ್‌ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

2021 ರಲ್ಲೇ ಮುಕೇಶ್‌ ಅಂಬಾನಿಯವರು ತಮ್ಮ ಮಕ್ಕಳಿಗೆ ಉದ್ಯಮದ ಜವಾಬ್ದಾರಿ ನೀಡುವ ಸೂಚನೆ ನೀಡಿದ್ದರು. ತಮ್ಮ ತಂದೆ ಧೀರೂಭಾಯ್‌ ಅಂಬಾನಿಯವರಂತೆ ಮಕ್ಕಳು ಸಹ ಉದ್ಯಮದಲ್ಲಿ ಶ್ರದ್ದೆ ಹೊಂದಿದ್ದಾರೆ ಎಂದು ಹೇಳಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...