alex Certify ಎಸ್‍.ಪಿ. ಕಚೇರಿಗೆ ಮುಲಾಯಂ ಸಿಂಗ್ ಅಚ್ಚರಿಯ ಭೇಟಿ…! ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದ ಹಿರಿಯ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್‍.ಪಿ. ಕಚೇರಿಗೆ ಮುಲಾಯಂ ಸಿಂಗ್ ಅಚ್ಚರಿಯ ಭೇಟಿ…! ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದ ಹಿರಿಯ ನಾಯಕ

Mulayam Singh Yadav's Surprise Visit to SP Office in Lucknow Enthuse Workers

ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರು ಲಖನೌನಲ್ಲಿನ ಪಕ್ಷದ ಕೇಂದ್ರ ಕಚೇರಿಗೆ ಅಚ್ಚರಿಯ ಭೇಟಿ ಕೊಟ್ಟು ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ.

2022ರಲ್ಲಿ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಎಸ್‍ಪಿ ಪಕ್ಷಕ್ಕೆ ಮುಲಾಯಂ ಅವರ ಈ ಭೇಟಿಯಿಂದ ಹೊಸ ಸ್ಫೂರ್ತಿ ಬಂದಿದೆ. ತಂದೆಯ ಪಕ್ಕದಲ್ಲೇ ನಿಂತಿದ್ದ ಎಸ್‍ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಕೂಡ ಭಾರಿ ಹುಮ್ಮಸ್ಸಿನಿಂದ ಕಾಣಿಸಿಕೊಂಡಿದ್ದು, ಈ ಬಾರಿ ಚುನಾವಣೆಯಲ್ಲಿ ಎಸ್‍ಪಿಗೆ 400 ಸೀಟುಗಳಲ್ಲಿ ಜಯ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

BIG NEWS: ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ; ಬರೋಬ್ಬರಿ 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಕಳೆದ ಎರಡು ವರ್ಷಗಳಿಂದಲೂ ವಯೋಸಹಜ ಕಾಯಿಲೆಗಳಿಂದಾಗಿ ಮುಲಾಯಂ ಅವರು ಪಕ್ಷದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದರು. ಎಸ್‍ಪಿ ಹಮ್ಮಿಕೊಂಡಿರುವ ಬಿಜೆಪಿ ಹಠಾವೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಸರಿಯಾಗಿ ಮುಲಾಯಂ ಪಕ್ಷದ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದು ವಿಶೇಷವಾಗಿದೆ. ಈ ವೇಳೆ ಅವರು ಕೂಡ 2022ರಲ್ಲಿ ಎಸ್‍ಪಿ ನೇತೃತ್ವದ ಸರ್ಕಾರ ರಚನೆಗೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...