alex Certify SHOCKING: ತಡರಾತ್ರಿ ಹೈವೇಯಲ್ಲಿ ಕತ್ತು ಸೀಳಿದ ಮಾಂಜಾ ದಾರ: ಪೊಲೀಸ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ತಡರಾತ್ರಿ ಹೈವೇಯಲ್ಲಿ ಕತ್ತು ಸೀಳಿದ ಮಾಂಜಾ ದಾರ: ಪೊಲೀಸ್ ಸಾವು

ಮುಂಬೈ: ಭಾನುವಾರ ತಡರಾತ್ರಿ ಮುಂಬೈನಲ್ಲಿ ಮಾಂಜಾ(ಗಾಳಿಪಟದ) ದಾರ ಕುತ್ತಿಗೆಗೆ ಸುತ್ತಿಕೊಂಡು ಪೊಲೀಸ್ ಪೇದೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಕಾನ್‌ಸ್ಟೆಬಲ್ ಸಮೀರ್ ಜಾಧವ್ ಮೃತಪಟ್ಟವರು. ಕರ್ತವ್ಯ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ದಿಂಡೋಶಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಜಾಧವ್ ಅವರು ವರ್ಲಿಯಲ್ಲಿರುವ ತಮ್ಮ ಮನೆಗೆ ತೆರಳಿದ್ದರು. ಗಾಯಗೊಂಡಿದ್ದ ಕೂಡಲೇ ಅವರನ್ನು ಸಮೀಪದ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಪೊಲೀಸರ ಪ್ರಕಾರ, ಸಾಂತಾಕ್ರೂಜ್‌ನ ವಕೋಲಾ ಸೇತುವೆಯ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಖೇರವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...