alex Certify ದೇಗುಲದಲ್ಲೇ ಹತ್ಯೆ: ಅನೈತಿಕ ಸಂಬಂಧದ ಶಂಕೆಯಿಂದ ಮಲಗಿದಲ್ಲೇ ವ್ಯಕ್ತಿ ಬರ್ಬರ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಗುಲದಲ್ಲೇ ಹತ್ಯೆ: ಅನೈತಿಕ ಸಂಬಂಧದ ಶಂಕೆಯಿಂದ ಮಲಗಿದಲ್ಲೇ ವ್ಯಕ್ತಿ ಬರ್ಬರ ಕೊಲೆ

ಮೈಸೂರು: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಚ್ಚಿನಿಂದ ಹಲ್ಲೆ ನಡೆಸಿ 39 ವರ್ಷದ ಮಹದೇವಸ್ವಾಮಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಹದೇವಸ್ವಾಮಿ ಮಲಗಿದ್ದ ವೇಳೆ ಆರೋಪಿ ಸೋಮಯ್ಯ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಸೋಮಯ್ಯನ ಪತ್ನಿಯೊಂದಿಗೆ ಮಹಾದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ ಆರೋಪ ಕೇಳಿ ಬಂದಿದೆ. ಇದೇ ವಿಚಾರಕ್ಕೆ ಮಹದೇವಸ್ವಾಮಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...