alex Certify ದಲಿತ ಮುಖಂಡನ ಬರ್ಬರ ಹತ್ಯೆ ಕೇಸ್, 13 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಲಿತ ಮುಖಂಡನ ಬರ್ಬರ ಹತ್ಯೆ ಕೇಸ್, 13 ಮಂದಿ ಅರೆಸ್ಟ್

ತುಮಕೂರು: ಗುಬ್ಬಿ ದಲಿತ ಮುಖಂಡ ನರಸಿಂಹ ಮೂರ್ತಿ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಆರೋಪಿಗಳನ್ನು ಬಂಧಿಸಲಾಗಿದೆ.

ಜೂನ್ 15 ರಂದು ನರಸಿಂಹ ಮೂರ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್ ಕುಮಾರ್ ಶಹಾಪುರವಾಡ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಿರಣ್, ರಾಜು ಅಲಿಯಾಸ್ ಕ್ಯಾಟ್ ರಾಜ, ನಯಾಸ್, ಕೀರ್ತಿ, ಮಂಜು ಅಲಿಯಾಸ್ ಮ್ಯಾಕ್ಸಿ, ಅಭಿಷೇಕ್, ಅಲಿಯಾಸ್ ಕರೀಂ, ವೆಂಕಟೇಶ, ಚಂದ್ರಶೇಖರ, ಭರತ್, ಧೀರಜ್, ವೆಂಕಟೇಶ, ಬಸವರಾಜ, ನಾಗರಾಜ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನರಸಿಂಹಮೂರ್ತಿ ಮತ್ತು ಆರೋಪಿ ಕಿರಣ್ ಪರಸ್ಪರ ಪರಿಚಯಸ್ಥರಾಗಿದ್ದು ಕೆಲವು ತಿಂಗಳ ಹಿಂದೆ ಬೇರೆಯಾಗಿ ದ್ವೇಷ ಬೆಳೆಸಿಕೊಂಡಿದ್ದರು. ಭೂ ವಿವಾದ ಹಾಗೂ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನರಸಿಂಹಮೂರ್ತಿಯನ್ನು ಕೊಲೆ ಮಾಡಿದ್ದರು. ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ನರಸಿಂಹಮೂರ್ತಿಯನ್ನು ಜೂ. 15 ರಂದು ಬರ್ಬರವಾಗಿ ಕೊಲೆ ಮಾಡಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...