ರೇಣುಕಾಸ್ವಾಮಿ ಕೊಲೆಗೈದು ಸ್ನಾನ ಮಾಡಿದ್ದ ದರ್ಶನ್ ಮನೆಯಲ್ಲಿ ಹಲವು ವಸ್ತು ಜಪ್ತಿ

ಬೆಂಗಳೂರು: ರಾಜರಾಜೇಶ್ವರಿ ನಗರದ ಐಡಿಯಲ್ ಹೋಂ ಟೌನ್‌ಶಿಪ್ ನಲ್ಲಿರುವ ನಟ ದರ್ಶನ್ ಅವರ ಮನೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಮಹಜರು ನಡೆಸಲಾಗಿದೆ.

ಅನ್ನಪೂರ್ಣೇಶ್ವರಿ ನಗರ ಠಾಣೆ ಪೋಲೀಸರು ಠಾಣೆಯಿಂದ ದರ್ಶನ್ ಅವರನ್ನು ಭದ್ರತೆಯಲ್ಲಿ ಕರೆದೊಯ್ದು ಮಹಜರು ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡಿದ ನಂತರ ದರ್ಶನ್ ಪಟ್ಟಣಗೆರೆ ಶೆಡ್ ನಿಂದ ನೇರವಾಗಿ ತಮ್ಮ ನಿವಾಸಕ್ಕೆ ಬಂದು ಸ್ನಾನ ಮಾಡಿದ್ದರು.

ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಕ್ಕೆ ಸಂಬಂಧಿಸಿದಂತೆ ಕೆಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ದರ್ಶನ್ ಕೃತ್ಯ ನಡೆದ ದಿನ ಧರಿಸಿದ ಬಟ್ಟೆಗಳು ಸೇರಿ ಕೆಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸಣ್ಣಪುಟ್ಟ ಸಾಕ್ಷ್ಯಗಳನ್ನು ಕೂಡ ಕಲೆ ಹಾಕಲಾಗುತ್ತಿದೆ. ಬೆಂಬಲಿಗರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದರೆ ಮಹಜರು ನಡೆಸಲು ತೊಂದರೆ ಆಗಬಹುದು ಎನ್ನುವ ಕಾರಣಕ್ಕೆ ತಡರಾತ್ರಿ ದರ್ಶನ್ ಮನೆಗೆ ಕರೆದೊಯ್ದು ಅವರ ಸಮ್ಮುಖದಲ್ಲಿಯೇ ಮಹಜರು ನಡೆಸಲಾಗಿದೆ.

ಇನ್ನು ಪಟ್ಟಣಗೆರೆ ಶೆಡ್ ನಲ್ಲಿ ಬಿದ್ದಿದ್ದ ರೇಣುಕಾಸ್ವಾಮಿ ತಲೆ ಕೂದಲು, ರಕ್ತದ ಮಾದರಿ ಸಂಗ್ರಹಿಸಿದ್ದು, ಆರೋಪಿಗಳ ಮೊಬೈಲ್ ಲೊಕೇಶನ್ ಪರಿಶೀಲಿಸಿದ್ದು, ಜೂನ್ 8ರಂದು ರಾತ್ರಿ ಎಲ್ಲರೂ ಒಂದೇ ಟವರ್ ವ್ಯಾಪ್ತಿಯಲ್ಲಿ ಇರುವುದು ಪತ್ತೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read