alex Certify SHOCKING NEWS: ಚಾಕುವಿನಿಂದ ಇರಿದು ಸೋದರ ಮಾವನನ್ನೇ ಕೊಂದ ಅಳಿಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಚಾಕುವಿನಿಂದ ಇರಿದು ಸೋದರ ಮಾವನನ್ನೇ ಕೊಂದ ಅಳಿಯ

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಜಿಗೆರೆ ಗ್ರಾಮದಲ್ಲಿ ಸೋದರ ಮಾವನನ್ನೇ ಅಳಿಯ ಕೊಲೆ ಮಾಡಿದ್ದಾನೆ.

50 ವರ್ಷದ ಪ್ರಭುಸ್ವಾಮಿ ಕೊಲೆಯಾದ ವ್ಯಕ್ತಿ. 22 ವರ್ಷದ ಅಜಯ್ ಕೊಲೆ ಆರೋಪಿಯಾಗಿದ್ದಾನೆ. ಗಂಜಿಗೆರೆಯ ಸಾವಿತ್ರಮ್ಮ ಪತಿಯನ್ನು ಬಿಟ್ಟು ತವರು ಮನೆ ಸೇರಿದ್ದು, ಅಣ್ಣ ಪ್ರಭುಸ್ವಾಮಿ ಪಕ್ಕದ ಮನೆಯಲ್ಲಿ ವಾಸವಾಗಿದ್ದರು. ಜಮೀನು ವಿಚಾರವಾಗಿ ಪ್ರಭುಸ್ವಾಮಿ ತಂಗಿ ಸಾವಿತ್ರಮ್ಮನೊಂದಿಗೆ ಜಗಳವಾಡುತ್ತಿದ್ದ. ಆಕೆಯ ಮಗಳನ್ನು ನಿಂದಿಸುತ್ತಿದ್ದ.

ಕುಡಿದು ಬಂದು ಪ್ರಭುಸ್ವಾಮಿ ಗಲಾಟೆ ಮಾಡುತ್ತಿರುವ ಬಗ್ಗೆ ಸಾವಿತ್ರಮ್ಮ ಬೇರೆ ಊರಿನಲ್ಲಿದ್ದ ಮಗ ಅಜಯ್ ಗೆ ಹೇಳಿದ್ದರು. ಅಜಯ್ ಗಂಜಿಗೆರೆಗೆ ಬಂದಾಗ ತಾಯಿ ಜೊತೆ ಮಾವ ಜಗಳವಾಡುತ್ತಿರುವುದನ್ನು ಗಮನಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...