alex Certify ಮನೆಗೆ ಬಂದು ಮದುವೆಯಾಗುವಂತೆ ಪೀಡಿಸಿದ ಯುವತಿ, ಪ್ರಿಯಕರನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆ ಬಂದು ಮದುವೆಯಾಗುವಂತೆ ಪೀಡಿಸಿದ ಯುವತಿ, ಪ್ರಿಯಕರನಿಂದಲೇ ಘೋರ ಕೃತ್ಯ

ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯೊಬ್ಬಳನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಹಾವೇರಿ ಸಮೀಪದ ಕರ್ಜಗಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ವಸತಿ ಶಾಲೆ ಸಮೀಪದ ರೇಷ್ಮೆ ಇಲಾಖೆಗೆ ಸೇರಿದ ಹಾಳುಬಿದ್ದ ಕಟ್ಟಡದ ಬಳಿ ಘಟನೆ ನಡೆದಿದೆ. ಕೌದಿಕಲ್ಲಾಪುರದ 21 ವರ್ಷದ ಯುವತಿಯನ್ನು ಪರಿಚಯಿಸಿಕೊಂಡಿದ್ದ ಯತ್ತಿನಹಳ್ಳಿ ಗ್ರಾಮದ ಕರಬಸಪ್ಪ ಮದುವೆಯಾಗುವುದಾಗಿ ನಂಬಿಸಿದ್ದ.

ಬುಧವಾರ ಸಂಜೆ ಕರಿಬಸಪ್ಪನ ಮನೆಗೆ ಹೋದ ಯುವತಿ ಹಣ ಕೊಡು, ಮದುವೆಯಾಗು ಎಂದು ಆತನಿಗೆ ಪೀಡಿಸಿದ್ದಾರೆ. ಹೇಳದೆ ಕೇಳದೆ ಮನೆಗೆ ಬಂದಿದ್ದಕ್ಕೆ ಆಕ್ರೋಶಗೊಂಡ ಕರಿಬಸಪ್ಪ ಬೈಕ್ ನಲ್ಲಿ ಯುವತಿಯನ್ನು ಕರೆದುಕೊಂಡು ಹೋಗಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ನಡೆದ 24 ಗಂಟೆಯೊಳಗೆ ಹಾವೇರಿ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...