alex Certify ಆಶ್ರಮದಿಂದ ನಾಪತ್ತೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಶ್ರಮದಿಂದ ನಾಪತ್ತೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ

ಬೆಳಗಾವಿ: ಹೀರೆಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನ ಮುನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಪೊಲೀಸರು ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತನಿಖೆ ವೇಳೆ ಜೈನ ಮುನಿ ಹತ್ಯೆ ರಹಸ್ಯ ಬಯಲಾಗಿದೆ. ಜುಲೈ 6ರಿಂದ ನಂದಿ ಪರ್ವತ ಆಶ್ರಮದಿಂದ ಜೈನ ಮುನಿ ನಾಪತ್ತೆಯಾಗಿದ್ದರು. ನಿನ್ನೆ ಚಿಕ್ಕೋಡಿ ಠಾಣೆಗೆ ಜೈನ ಮುನಿ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿದ್ದು, ಆಚಾರ್ಯ ಕಾಮಕುಮಾರ ನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದರು.

ಜೈನ ಮುನಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆದರೆ ಇನ್ನೂ ಮೃತ ದೇಹ ಪತ್ತೆಯಾಗಿಲ್ಲ. ಕೊಲೆ ಬಳಿಕ ಶವ ಬಿಸಾಕಿರುವ ಬಗ್ಗೆ ಗೊಂದಲದ ಹೇಳಿಕೆ ನೀಡಿದ್ದಾರೆ. ಎಲ್ಲಿ ಶವ ಹಾಕಿದ್ದೇವೆ ಎಂದು ಆರೋಪಿಗಳು ಸ್ಪಷ್ಟ ಮಾಹಿತಿ ನೀಡಿಲ್ಲ. ಶವ ಕತ್ತರಿಸಿ ಕೊಳವೆ ಬಾವಿಗೆ ಎಸೆದಿದ್ದೇವೆ ಎಂದು ಹೇಳಿದ್ದಾರೆ. ಖಟಕಬಾವಿ ಗ್ರಾಮದ ಗದ್ದೆಯ ಕೊಳವೆ ಬಾವಿಯಲ್ಲಿ ಹಾಕಿರುವುದಾಗಿ ಒಮ್ಮೆ, ನದಿಯಲ್ಲಿ ಎಸೆದಿರುವುದಾಗಿ ಮತ್ತೊಮ್ಮೆ ಹೇಳಿದ್ದು, ಪೊಲೀಸರು ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...