alex Certify ಅಸಭ್ಯವಾಗಿ ವರ್ತಿಸಿದ ಕಾಮುಕನಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಬಾಲಕಿ ಕೊಲೆ, ಆತ್ಮಹತ್ಯೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಸಭ್ಯವಾಗಿ ವರ್ತಿಸಿದ ಕಾಮುಕನಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಬಾಲಕಿ ಕೊಲೆ, ಆತ್ಮಹತ್ಯೆ ಯತ್ನ

ಬೆಂಗಳೂರು: ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದಕ್ಕೆ ಬಾಲಕಿಯನ್ನು ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಬಾಲಕಿ ಕೊಂದ ವ್ಯಕ್ತಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ ಕ್ವಾಟ್ರಸ್ ನಲ್ಲಿ ಘಟನೆ ನಡೆದಿದೆ. ಉತ್ತರಾಖಂಡ್ ಮೂಲದ 11 ವರ್ಷದ ಬಾಲಕಿ ಖುಷಿಯನ್ನು ಹರಿಯಾಣ ಮೂಲದ ನಂದಕಿಶೋರ್(50) ಇರಿದು ಕೊಲೆ ಮಾಡಿದ್ದಾನೆ. ಬಳಿಕ ತಾನು ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂದಕಿಶೋರ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ತಂದೆ ಹಾಗೂ ಆರೋಪಿ ಜಿಂದಾಲ್ ಕಂಪನಿಯ ನೌಕರರಾಗಿದ್ದಾರೆ. ಬಾಲಕಿ ಖುಷಿ ಜೊತೆಗೆ ನಂದಕಿಶೋರ್ ಅಸಾಧ್ಯವಾಗಿ ವರ್ತಿಸಿದ್ದ. ಆತನ ಕೃತ್ಯದ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಳು.

ಬಾಲಕಿ ಆರೋಪದ ಹಿನ್ನೆಲೆಯಲ್ಲಿ ಜಿಂದಾಲ್ ಕಂಪನಿಯಿಂದ ನೋಟಿಸ್ ಜಾರಿಗೊಳಿಸಲಾಗಿತ್ತು. ಕ್ವಾಟ್ರಸ್ ಖಾಲಿ ಮಾಡುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಬಾಲಕಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಪೋಷಕರಿಗೆ ವಿಷಯ ತಿಳಿಸಿದ್ದಕ್ಕೆ ಬಾಲಕಿಯನ್ನು ಕೊಲೆ ಮಾಡಿದ ನಂದಕಿಶೋರ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಾದನಾಯಕನಹಳ್ಳಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...