alex Certify ಚಿತ್ರದುರ್ಗ ಮುರುಘಾ ಮಠದಲ್ಲಿ ಸ್ವಾಮೀಜಿಯ 47 ಫೋಟೋ ಕಳವು ಮಾಡಿದ್ದ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರದುರ್ಗ ಮುರುಘಾ ಮಠದಲ್ಲಿ ಸ್ವಾಮೀಜಿಯ 47 ಫೋಟೋ ಕಳವು ಮಾಡಿದ್ದ ಇಬ್ಬರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಮಾಡಿದ್ದ ಆರೋಪಿಗಳಿಬ್ಬರನ್ನು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ, ಎಸ್.ಜೆ.ಎಂ. ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿ ಅವರನ್ನು ಬಂಧಿಸಲಾಗಿದೆ. ಇವರಿಬ್ಬರನ್ನು ಬಂಧಿಸಿದ ಪೊಲೀಸರು ಚಿತ್ರದುರ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಎ 1 ಮೋಹನ ಮೂರ್ತಿ ಅಲಿಯಾಸ್ ಸ್ವಾಮಿಗೆ ಎರಡು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. ಎ 2 ಉಪನ್ಯಾಸಕ ಶಿವಾನಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಸದ್ಯ ಅಪಘಾತಕ್ಕೀಡಾಗಿ ಶಿವಾನಂದ ಸ್ವಾಮಿ ಕಾಲು ಮುರಿದುಕೊಂಡಿದ್ದಾರೆ.

ಇವರಿಬ್ಬರು ಅ. 6 ರಂದು ಮಠದ ರಾಜಾಂಗಣದ ಗೋಡೆ ಮೇಲಿದ್ದ ಫೋಟೋ ಕಳವು ಮಾಡಿದ್ದರು. ವಿವಿಧ ಗಣ್ಯರ ಜೊತೆಗೆ ಮುರುಘಾ ಶ್ರೀಗಳು ಇರುವ ಫೋಟೋಗಳನ್ನು ಕಳ್ಳತನ ಮಾಡಿದ್ದರು. ಮಠದಲ್ಲಿನ ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...