alex Certify BREAKING NEWS: ಮುರುಘಾ ಶರಣರಿಗೆ ಮತ್ತೆ ಸಂಕಷ್ಟ; ಅರೆಸ್ಟ್ ವಾರೆಂಟ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುರುಘಾ ಶರಣರಿಗೆ ಮತ್ತೆ ಸಂಕಷ್ಟ; ಅರೆಸ್ಟ್ ವಾರೆಂಟ್ ಜಾರಿ

ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರದುರ್ಗ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳಿಗೆ ಬಂಧನದ ವಾರೆಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

ಮೊದಲನೇ ಪೋಕ್ಸೋ ಕೇಸ್ ನಲ್ಲಿ ಹೈಕೋರ್ಟ್ ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪೋಕ್ಸೋ ಕೇಸ್ ನಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...