alex Certify ಮುರುಘಾ ಶರಣರ ವಿರುದ್ಧ 2 ನೇ ಪೋಕ್ಸೋ ಕೇಸ್: ಸ್ವಾಮೀಜಿ ಸಹಾಯಕ, ಅಡುಗೆ ಸಿಬ್ಬಂದಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಶರಣರ ವಿರುದ್ಧ 2 ನೇ ಪೋಕ್ಸೋ ಕೇಸ್: ಸ್ವಾಮೀಜಿ ಸಹಾಯಕ, ಅಡುಗೆ ಸಿಬ್ಬಂದಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮತ್ತು 7ನೇ ಆರೋಪಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ಪ್ರಕರಣದ 6ನೇ ಆರೋಪಿ ಮುರುಘಾ ಶ್ರೀ ಸಹಾಯಕ ಮಹಾಲಿಂಗ ಮತ್ತು 7ನೇ ಆರೋಪಿ ಅಡುಗೆ ಭಟ್ಟ ಕರಿಬಸಪ್ಪ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಅ. 28ಕ್ಕೆ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಿಚಾರಣೆ ಮುಂದೂಡಿದೆ.

ನ್ಯಾಯಾಲಯಕ್ಕೆ ಇಬ್ಬರು ಸಂತ್ರಸ್ತ ಬಾಲಕಿಯರು ಹಾಜರಾಗಿದ್ದಾರೆ. ಸಂತ್ರಸ್ತರ ಸಮ್ಮುಖದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆದು, ಆರೋಪಿಗಳ ಪರವಾಗಿ ವಕೀಲ ಪ್ರತಾಪ್ ಜೋಗಿ ಅರ್ಜಿ ಸಲ್ಲಿಸಿದ್ದಾರೆ. ಸಂತ್ರಸ್ತರ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದಾರೆ. ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...