alex Certify BREAKING: ಮುರುಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: ಬರೋಬ್ಬರಿ 98 ಮಂದಿಗೆ ಜೀವಾವಧಿ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮುರುಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: ಬರೋಬ್ಬರಿ 98 ಮಂದಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೂವರು ಅಪರಾಧಿಗಳಿಗೆ 5 ವರ್ಷ ಕಠಿಣ ಶಿಕ್ಷೆ ತಲಾ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಜೀವಾವಧಿ ಶಿಕ್ಷೆಗೆ ಒಳಗಾದ 98 ಅಪರಾಧಿಗಳಿಗೆ ತಲಾ 5 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಶಿಕ್ಷೆಗೊಳಗಾದವರು ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದ ನಿವಾಸಿಗಳಾಗಿದ್ದಾರೆ. 2014ರ ಆಗಸ್ಟ್ 28 ರಂದು ಗ್ರಾಮದಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ನಡೆದಿತ್ತು. ದಲಿತರ ಮನೆ ಸುಟ್ಟು ದಾಳಿ ಮಾಡಿದ ಪ್ರಕರಣದಲ್ಲಿ 101 ಮಂದಿ ಅಪರಾಧಿಗಳು ಎಂದು ಅ. 21ರಂದು ನ್ಯಾಯಾಧೀಶರು ಘೋಷಿಸಿದ್ದರು.

ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ಸಂಬಂಧ ಶಿಕ್ಷೆ ಪ್ರಕಟಿಸಲಾಗಿದೆ. ಸಿನಿಮಾ ನೋಡಲು ಹೋದಾಗ ದಲಿತ ಮಂಜುನಾಥನ ಮೇಲೆ ಹಲ್ಲೆ ನಡೆಸಲಾಗಿತ್ತು. ತಮ್ಮೂರಿನ ದಲಿತರೇ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮದ ಜನರಿಗೆ ಮಂಜುನಾಥ ಹೇಳಿದ್ದ. ನಂತರ ಎರಡೂ ಕಡೆಯವರ ನಡುವೆ ಗಲಾಟೆಯಾಗಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...