alex Certify BIG NEWS: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಬಸ್ ಚಾಲಕನ ಹುಚ್ಚಾಟ: ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಬಸ್ ಚಾಲಕನ ಹುಚ್ಚಾಟ: ಇಬ್ಬರು ಅರೆಸ್ಟ್

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಖಾಸಗಿ ಬಸ್ ಚಾಲಕನೊಬ್ಬ ಹುಚ್ಚಾಟ ಮೆರೆದಿದ್ದು, ಬಸ್ ಚಾಲಕರನ್ನು ಬಂಧಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಶ್ರೀರಂಗಪುಟ್ಟಣದ ಬ್ರಹ್ಮಪುರ ಬಳಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಿಆರ್ ಎಲ್ ಬಸ್ ಚಾಲಕ ನಿಮಗಳನ್ನು ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಅತಿ ವೇಗವಾಗಿ ರ‍್ಯಾಶ್ ಡ್ರೈವ್ ಮಾಡಿದ್ದಾನೆ. ಆಗಸ್ಟ್ 24ರಂದು ನಡೆದಿದ್ದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸಿದ್ದರು.

ಇದೀಗ ಪೊಲೀಸರು ಬಸ್ ಚಾಲಕ ಪ್ರಶಾಂತ್, ನೀಲಪ್ಪ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...