
ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮೈಸೂರು ಸಮೀಪದ ಉದ್ಬೂರು ಗೇಟ್ ಬಳಿ ನಡೆದಿದೆ.
ಮೈಸೂರು –ಹೆಚ್.ಡಿ. ಕೋಟೆ ರಸ್ತೆಯ ಉದ್ಬೂರು ಗೇಟ್ ಬಳಿ ಗಟ್ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಂದನ್ ಮತ್ತು ಶಿವಕುಮಾರ್ ಮೃತಪಟ್ಟಿದ್ದಾರೆನ್ನಲಾಗಿದೆ. ಮೈಸೂರಿನ ಜಯಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.