alex Certify ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆ ಮೇಯರ್​ ಚುನಾವಣೆಗೆ ತಡೆ ನೀಡಿದ ಹೈಕೋರ್ಟ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆ ಮೇಯರ್​ ಚುನಾವಣೆಗೆ ತಡೆ ನೀಡಿದ ಹೈಕೋರ್ಟ್…!

ನಾಳೆ ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್​​ ಚುನಾವಣೆಗೆ ರಾಜ್ಯ ಹೈಕೋರ್ಟ್​ ತಡೆಯೊಡ್ಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಜೂನ್​ 21ರವರೆಗೆ ಮೇಯರ್​ ಚುನಾವಣೆ ನಡೆಸೋದು ಸರಿಯಲ್ಲ. ಜೂನ್​ 21ರ ಬಳಿಕ ಪರಿಸ್ಥಿತಿಯನ್ನ ನೋಡಿಕೊಂಡು ದಿನಾಂಕ ನಿಗದಿ ಮಾಡಿ ಎಂದು ಹೈಕೋರ್ಟ್ ಆದೇಶ ನೀಡಿದೆ.

ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಯಲ್ಲಿ ಈ ಸಂದರ್ಭದಲ್ಲಿ ಪಾಲಿಕೆ ಮೇಯರ್​ ಚುನಾವಣೆ ಅವಶ್ಯಕತೆ ಇತ್ತೇ ಎಂದು ಪ್ರಶ್ನಿಸಿ ಪಾಲಿಕೆ ಸದಸ್ಯ ಹಾಗೂ ಕಾಂಗ್ರೆಸ್​ ನಾಯಕ ಪ್ರದೀಪ್​ ಚಂದ್ರ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್​ ಏಕಸದಸ್ಯ ಪೀಠ ಈ ಮಧ್ಯಂತರ ಆದೇಶ ನೀಡಿದೆ.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ವಕೀಲ ಎಲ್​. ಎಂ. ಚಿದಾನಂದಯ್ಯ ಮೈಸೂರಿನಲ್ಲಿ ಕೋವಿಡ್​ ಸೋಂಕು ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಚುನಾವಣೆ ನಡೆಸಿದರೆ ಜನರು ಒಂದೆಡೆ ಸೇರುವ ಸಾಧ್ಯತೆ ಹೆಚ್ಚಾಗುತ್ತದೆ. ಹೀಗಾಗಿ ಮೇಯರ್​ ಚುನಾವಣೆ ಮುಂದೂಡುವಂತೆ ಹೈಕೋರ್ಟ್ ಬಳಿ ಕೇಳಿಕೊಂಡಿದ್ದರು. ವಾದ – ವಿವಾದಗಳನ್ನ ಆಲಿಸಿದ ರಾಜ್ಯ ಹೈಕೋರ್ಟ್ ಜೂನ್​ 21ರವರೆಗೂ ಚುನಾವಣೆ ಬೇಡ ಎಂದು ಆದೇಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...