alex Certify ಸಂಬಂಧಿಕರಿಂದಲೇ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಬಂಧಿಕರಿಂದಲೇ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆಯಾಗಿದ್ದು ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಹಿನಕಲ್ ಗ್ರಾಮದ ನಾಯಕರ ಬೀದಿಯಲ್ಲಿ ನಡೆದಿದೆ.

50 ವರ್ಷದ ಸಾಕಮ್ಮ ಕೊಲೆಯಾದವರು ಎಂದು ಹೇಳಲಾಗಿದೆ. ಸಾಕಮ್ಮನವರ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮನು, ಗೋವಿಂದನಾಯ್ಕ, ಕಿರಣ್, ಮತ್ತು ಲಕ್ಷ್ಮಿ ಅವರನ್ನು ಬಂಧಿಸಲಾಗಿದೆ. ಹತ್ಯೆ ಬಳಿಕ ಮತ್ತೊಬ್ಬ ಆರೋಪಿ ಮನೋಜ್ ಪರಾರಿಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಗ್ರಾಮದ ದಾಸನಾಯಕ ಅವರ ಪತ್ನಿ ಸಾಕಮ್ಮನಿಗೂ ಬಂಧಿತರಿಗೂ ಆಸ್ತಿ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...