alex Certify ಗ್ರೇಟ್ ಎಸ್ಕೇಪ್…! ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಪಾರಾದ ಅರಣ್ಯ ಇಲಾಖೆ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರೇಟ್ ಎಸ್ಕೇಪ್…! ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಪಾರಾದ ಅರಣ್ಯ ಇಲಾಖೆ ಸಿಬ್ಬಂದಿ

ಮೈಸೂರು: ಅರಣ್ಯ ಇಲಾಖೆಯ ಸಿಬ್ಬಂದಿ ಕಡೆಗೆ ಕಾಡಾನೆ ಧಾವಿಸಿ ಬಂದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಘೋರ ದುರಂತ ತಪ್ಪಿದೆ. ಜೀಪ್ ಚಾಲಕನ ಸಮಯ ಪ್ರಜ್ಞೆಯಿಂದ ಸಿಬ್ಬಂದಿ ಜೀವ ಉಳಿದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಗರಹೊಳೆ ವೀರನಹೊಸಹಳ್ಳಿ ರಸ್ತೆ ಮಧ್ಯೆ ಕಾಡಾನೆ ನಿಂತಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನಕ್ಕೆ ಅಡ್ಡ ಬಂದಿದೆ. ಅರಣ್ಯಾಧಿಕಾರಿಗಳ ಮೇಲೆ ಆನೆ ದಾಳಿ ಮಾಡಿದೆ. ಈ ವೇಳೆ ಜೀಪ್ ಚಾಲಕ ಹಿಮ್ಮುಖವಾಗಿ ವೇಗವಾಗಿ ಜೀಪ್ ಚಾಲನೆ ಮಾಡಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಜೀಪ್ ಕಡೆಗೆ ದೌಡಾಯಿಸಿದ ಕಾಡಾನೆ ಸ್ವಲ್ಪ ದೂರದವರೆಗೂ ಬೆನ್ನಟ್ಟಿ ಬಂದು ಬಳಿಕ ಕಾಡಿನೊಳಗೆ ತೆರಳಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...