alex Certify ನಾಳೆ ನಾರಾಯಣಗೌಡರಿಗೆ ‘ಜಾಮೀನು’ ಸಿಗುವ ನಿರೀಕ್ಷೆಯಿದೆ : ಕರವೇ ಕಾರ್ಯಕರ್ತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ನಾರಾಯಣಗೌಡರಿಗೆ ‘ಜಾಮೀನು’ ಸಿಗುವ ನಿರೀಕ್ಷೆಯಿದೆ : ಕರವೇ ಕಾರ್ಯಕರ್ತರು

ಬೆಂಗಳೂರು : ನಾಳೆ ನಮ್ಮ ಅಧ್ಯಕ್ಷರು ನಾರಾಯಣಗೌಡರಿಗೆ ‘ಜಾಮೀನು’ ಸಿಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹೇಳಿದ್ದಾರೆ.

ಪರಪ್ಪನ ಅಗ್ರಹಾರ ಬಳಿ ಕರವೇ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಕರವೇ ರಾಜ್ಯ ಉಪಾಧ್ಯಕ್ಷ ಸತೀಶ್ ಗೌಡ  ನಾಳೆ ನಮ್ಮ ಅಧ್ಯಕ್ಷರು ನಾರಾಯಣಗೌಡರಿಗೆ ‘ಜಾಮೀನು’ ಸಿಗುವ ನಿರೀಕ್ಷೆಯಿದೆ ಎಂದರು.

ಈ ಸರ್ಕಾರ ಕನ್ನಡಿಗರ ವಿರೋಧಿಯಾಗಿದೆ. ಕನ್ನಡಿಗರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ ಎಂದು ಕಿಡಿಕಾರಿದರು. ನಾಳೆ ನಾರಾಯಣ ಗೌಡರನ್ನು ಬಿಡುಗಡೆ ಮಾಡದಿದ್ರೆ ಉಗ್ರವಾದ ಹೋರಾಟ ಮಾಡುತ್ತೇವೆ, ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...