alex Certify ಪಾಕಿಸ್ತಾನಕ್ಕೆ ನೌಕಾದಳದ ಮಾಹಿತಿ ರವಾನೆ: ಕಾರವಾರದಲ್ಲಿ ಮೂವರ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕಿಸ್ತಾನಕ್ಕೆ ನೌಕಾದಳದ ಮಾಹಿತಿ ರವಾನೆ: ಕಾರವಾರದಲ್ಲಿ ಮೂವರ ವಿಚಾರಣೆ

ಕಾರವಾರ: ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಯ ಫೋಟೋ, ಮಾಹಿತಿಗಳನ್ನು ಪಾಕಿಸ್ತಾನ ಮತ್ತು ವಿದೇಶಿ ಗುಪ್ತಚರ ಏಜೆಂಟರಿಗೆ ಕಳುಹಿಸಿದ ಆರೋಪದ ಮೇಲೆ ಮೂವರನ್ನು ರಾಷ್ಟ್ರೀಯ ತನಿಖಾ ದಳ(NIA) ವಿಚಾರಣೆಗೆ ಒಳಪಡಿಸಿದೆ.

ಎನ್ಐಎ ಮೂವರು ಅಧಿಕಾರಿಗಳು ಸೇರಿ ಆರು ಮಂದಿಯ ತಂಡ ಕಾರವಾರಕ್ಕೆ ಆಗಮಿಸಿದೆ. ನೌಕಾದಳದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ತೊಡೂರಿನ ಸುನಿಲ್ ನಾಯ್ಕ, ಮುದಗಾದ ವೇತನ್ ತಾಂಡೇಲಾ ಹಾಗೂ ಅಂಕೋಲಾದ ಅಳವಳ್ಳಿಯ ಅಕ್ಷಯ ನಾಯಕ್ ಅವರನ್ನು ವಿಚಾರಣೆಗೆ ಒಳಪಡಿಸಿದೆ.

ದೇಶ ವಿರೋಧಿ ಚಟುವಟಿಕೆಯ ಆರೋಪದ ಮೇಲೆ 2023ರಲ್ಲಿ ಹೈದರಾಬಾದ್ ನಲ್ಲಿ ದೀಪಕ್ ಮತ್ತಿತರರನ್ನು ರಾಷ್ಟ್ರೀಯ ತನಿಖಾದಳ ಬಂಧಿಸಿದ್ದು, ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಈ ಮೂವರ ಹೆಸರನ್ನು ಹೇಳಿದ್ದರು. ನೌಕಾಪಡೆಯ ಯುದ್ಧ ಹಡಗು ಸ್ಥಳದ ಮಾಹಿತಿ ಇರುವ ಫೋಟೋಗಳನ್ನು ಇವರು ದೀಪಕ್ ಎಂಬಾತನಿಗೆ ಕಳುಹಿಸಿದ ಆರೋಪವಿದೆ. ಈ ಮಾಹಿತಿ ನೀಡಿದ್ದಕ್ಕೆ ಪ್ರತಿಯಾಗಿ ಮೂವರಿಗೆ ಹಣ ಕೂಡ ಜಮೆ ಆಗಿದೆ ಎನ್ನಲಾಗಿದೆ.

ಸೀಬರ್ಡ್ ನೌಕಾನೆಲೆಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ ಅಕ್ಷಯ್ ಇತ್ತೀಚೆಗೆ ಗೋವಾದಲ್ಲಿ ಕೆಲಸ ಮಾಡುತ್ತಿದ್ದು ಆತನನ್ನು ಅಲ್ಲಿಯೇ ವಿಚಾರಣೆ ನಡೆಸಲಾಗಿದೆ. ಉಳಿದ ಇಬ್ಬರನ್ನು ಕಾರವಾರದಲ್ಲಿ ವಿಚಾರಣೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...