alex Certify ದುನಿಯಾ ವಿಜಯ್​ ತಾಯಿ ನೆನೆದು ಭಾವನಾತ್ಮಕ ಪೋಸ್ಟ್​ ಶೇರ್​ ಮಾಡಿದ ಗಾಯಕ ನವೀನ್​ ಸಜ್ಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುನಿಯಾ ವಿಜಯ್​ ತಾಯಿ ನೆನೆದು ಭಾವನಾತ್ಮಕ ಪೋಸ್ಟ್​ ಶೇರ್​ ಮಾಡಿದ ಗಾಯಕ ನವೀನ್​ ಸಜ್ಜು

ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್​ ತಾಯಿ ನಾರಾಯಣಮ್ಮ ನಿನ್ನೆ ತೀವ್ರ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ʼಮತ್ತೆ ಹುಟ್ಟಿ ಬಾ ಅಮ್ಮʼ ಎಂದು ಫೇಸ್​ಬುಕ್​ ಪೋಸ್ಟ್​ ಹಾಕುವ ಮೂಲಕ ದುನಿಯಾ ವಿಜಯ್​ ಮಾತೃವಿಯೋಗದ ವಿಚಾರವನ್ನ ಬಹಿರಂಗಪಡಿಸಿದ್ದರು. ಇದೀಗ ಸ್ಯಾಂಡಲ್​ವುಡ್​ ಗಾಯಕ ನವೀನ್​ ಸಜ್ಜು ಕೂಡ ದುನಿಯಾ ವಿಜಯ್​​ ತಾಯಿ ಬಗ್ಗೆ ಭಾವನಾತ್ಮಕ ಪೋಸ್ಟ್​ ಒಂದನ್ನ ಶೇರ್​ ಮಾಡಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಾರಾಯಣಮ್ಮ ಹಾಸಿಗೆಯ ಮೇಲೆ ಮಲಗಿಕೊಂಡೇ ನವೀನ್​ ಸಜ್ಜು ಅವರು ಹಾಡುತ್ತಿರುವ ʼಒಳಿತು ಮಾಡು ಮನುಸಾ ನೀನಿರದು ಮೂರೇ ದಿವಸʼ ಎಂಬ ಹಾಡನ್ನ ಕೇಳುತ್ತಿರುವ ವಿಡಿಯೋ ಶೇರ್​ ಮಾಡಿರುವ ನವೀನ್​​​ ಈ ವಿಡಿಯೋದ ಹಿಂದಿನ ಘಟನೆಯನ್ನ ಶೀರ್ಷಿಕೆ ಮೂಲಕ ಬಿಚ್ಚಿಟ್ಟಿದ್ದಾರೆ.

ದುನಿಯಾ ವಿಜಯ್​ ಅಣ್ಣನ ಅಮ್ಮ ನಿನ್ನೆ ನಮ್ಮನ್ನೆಲ್ಲಾ ಬಿಟ್ಟು ಹೋಗಿದ್ದಾರೆ. ಮನೆಗೆ ಹೋದಾಗಲೆಲ್ಲಾ ಮಗನೆ ಎಂದೆ ಬಾಯಿ ತುಂಬಾ ಕರೆಯುತ್ತಿದ್ದ ಅಮ್ಮ, ನಮ್ಮನ್ನು ನೋಡಿಕೊಳ್ಳುತ್ತಿದ್ದ ಪ್ರೀತಿಗೆ ಸರಿಸಾಟಿಯೇ ಇಲ್ಲ. ಅವರಿಗೆ ನಾನು ಹಾಡುವ ‘ಒಳಿತು ಮಾಡು ಮನುಸ, ನೀ ಇರೋದು ಮೂರೆ ದಿವಸ….’ ಹಾಡೆಂದರೆ ಬಹಳ ಇಷ್ಟ. ಅವರಿಗೆ ಇಷ್ಟವಾದಾಗಲೆಲ್ಲ ಈ ಹಾಡು ಹೇಳಪ್ಪ ಎಂದು ಹೇಳಿ ಕೇಳುತ್ತಿದ್ದರು. ಹಾಡು ಕೇಳಿ ಮೌನವಾಗಿ ಕಣ್ಣಂಚಲ್ಲಿ ನೀರು ತಂದುಕೊಳ್ಳುತ್ತಿದ್ದರು. ಸಮಾಧಾನಪಟ್ಟುಕೊಳ್ಳುತ್ತಿದ್ದರು.

ಕಳೆದ ಕೆಲವು ದಿನಗಳ ಹಿಂದೆ ಕೋಮಾ ಸ್ಥಿತಿಗೆ ತೆರಳಿದ ಅಮ್ಮ ಯಾರನ್ನು ಗುರುತು ಹಿಡಿಯುವ, ಮಾತಾಡುವ ಶಕ್ತಿ ಕಳೆದುಕೊಂಡಿದ್ದರು. ಒಮ್ಮೆ ವಿಜಿಯಣ್ಣ ವಿಡಿಯೋ ಕಾಲ್ ಮಾಡಿ ಈ ಹಾಡನ್ನು ಹಾಡುವಂತೆ ಹೇಳಿದರು. ಬಹುಶಃ ಹಾಡನ್ನು, ನನ್ನನ್ನು ಗುರುತಿಸುತ್ತಾರಾ? ಎಂಬ ಆಸೆಯಿಂದ ಹೀಗೆ ಮಾಡಿದ್ದರು. ಅದರಂತೆ ಹಾಸಿಗೆ ಮೇಲೆ ಕೋಮಾ ಸ್ಥಿತಿಯಲ್ಲಿ ಮಲಗಿದ್ದ ಅಮ್ಮನ ಎದುರು ಫೋನ್ ನಲ್ಲಿ ಹಾಡನ್ನು ಹಾಡಿದೆ. ಹಾಡು ಮುಗಿದ ಕೊನೆಗೆ ಅವರ ಕಣ್ಣಂಚಲ್ಲಿ ನೀರು ತುಂಬಿತ್ತು. ಆದರೆ ಮಾತನಾಡುವ ಶಕ್ತಿ ಇರಲಿಲ್ಲ. ಇನ್ನು ಅಮ್ಮ ಬರೀ ನೆನಪಾಗಿ ಮಾತ್ರ ಉಳಿಯಲಿದ್ದಾರೆ. ಅವರೊಂದಿಗೆ ಕಳೆದ ಕ್ಷಣ, ಅವರು ತೋರುತ್ತಿದ್ದ ಪ್ರೀತಿ, ಹಾಡು ಕೇಳುತ್ತಿದ್ದ ಪರಿ. ನೆನಪುಗಳಾಗಿ ಉಳಿದುಹೋಗಲಿವೆ. ಮಿಸ್ ಯು ಅಮ್ಮ……ಎಂದು ಭಾವನಾತ್ಮಕವಾಗಿ ಸಂದೇಶವನ್ನ ಬರೆದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...