alex Certify BIG NEWS: ನಾಳೆ ಬೆಂಗಳೂರಿಗೆ ಹಾವೇರಿ ನವೀನ್ ಮೃತದೇಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ಬೆಂಗಳೂರಿಗೆ ಹಾವೇರಿ ನವೀನ್ ಮೃತದೇಹ

ಬೆಂಗಳೂರು: ಉಕ್ರೇನ್ ನಲ್ಲಿ ಬಲಿಯಾದ ಹಾವೇರಿಯ ನವೀನ್ ಮೃತದೇಹವನ್ನು ಪೋಲೆಂಡ್ ರಾಜಧಾನಿ ವಾರ್ಸಾದಿಂದ ಭಾರತಕ್ಕೆ ರವಾನಿಸಲಾಗಿದೆ. ಸೋಮವಾರ ಬೆಳಗಿನ ಜಾವ ನವೀನ್ ಮೃತದೇಹ ಬೆಂಗಳೂರಿಗೆ ತಲುಪಲಿದೆ.

ಅಗತ್ಯ ದಾಖಲೆ ಪರಿಶೀಲನೆ ನಂತರ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿಗೆ ಶುಕ್ರವಾರ ಮೃತದೇಹ ಹಸ್ತಾಂತರ ಮಾಡಲಾಗಿದೆ. ಮೃತದೇಹ ಹೊತ್ತ ಎಮಿರೆಟ್ಸ್ ವಿಮಾನ ದುಬೈ ತಲುಪಿದ್ದು, ಅಲ್ಲಿಂದ ಮತ್ತೊಂದು ವಿಮಾನದಲ್ಲಿ ಬೆಂಗಳೂರಿಗೆ ಸೋಮವಾರ ಬೆಳಗಿನ ಜಾವ 3 ಗಂಟೆಗೆ ತಲುಪಲಿದೆ.

ಕುಟುಂಬದವರು ಅಂತಿಮ ವಿಧಿವಿಧಾನ ನೆರವೇರಿಸಿದ ನಂತರ ದಾವಣಗೆರೆ ಎಸ್ಎಸ್ ಮೆಡಿಕಲ್ ಕಾಲೇಜಿಗೆ ಮೃತದೇಹ ಹಸ್ತಾಂತರ ಮಾಡಲಿದ್ದಾರೆ. ಮಾರ್ಚ್ 1 ರಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಉಕ್ರೇನ್ ನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...