alex Certify NCP ಗೆ ನಾನೇ ರಾಷ್ಟ್ರೀಯ ಅಧ್ಯಕ್ಷ; ಭಿನ್ನಮತಿಯರ ವಿರುದ್ಧ ಗುಡುಗಿದ ಶರದ್ ಪವಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

NCP ಗೆ ನಾನೇ ರಾಷ್ಟ್ರೀಯ ಅಧ್ಯಕ್ಷ; ಭಿನ್ನಮತಿಯರ ವಿರುದ್ಧ ಗುಡುಗಿದ ಶರದ್ ಪವಾರ್

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದ ನಂತರ ಎನ್ ಸಿ ಪಿ ಗೆ ನಾಯಕ ಯಾರೆಂಬ ಕುರಿತು ಪೈಪೋಟಿ ನಡೆದಿದೆ. ಪಕ್ಷದ ಈ ರಾಜಕಾರಣ ಈಗ ರಾಷ್ಟ್ರ ರಾಜಧಾನಿಯನ್ನು ತಲುಪಿದ್ದು, ಹಿರಿಯ ನಾಯಕ ಶರದ್ ಪವಾರ್ ನವದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಸಿದ್ದಾರೆ.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ಮಾತನಾಡಿರುವ ಶರದ್ ಪವಾರ್, ನಮ್ಮದೇ ನಿಜವಾದ ಎನ್ ಸಿ ಪಿ. ನಾನೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂದು ಹೇಳಿದ್ದಾರಲ್ಲದೆ ಬಂಡಾಯ ಸಾರಿರುವ ಅಜಿತ್ ಪವಾರ್ ಸೇರಿದಂತೆ ಭಿನ್ನಮತಿಯರ ವಿರುದ್ಧ ಗುಡುಗಿದ್ದಾರೆ.

ಅಜಿತ್ ಪವಾರ್ ಹಾಗೂ ಅವರ ಜೊತೆ ಕೈಜೋಡಿಸಿರುವ 8 ಬಂಡಾಯ ಶಾಸಕರು ಮತ್ತು ಇಬ್ಬರು ಸಂಸದರನ್ನು ಪಕ್ಷದಿಂದ ವಜಾಗೊಳಿಸಲಾಗಿದ್ದು, ಅಜಿತ್ ಬಂಡಾಯದ ವಿರುದ್ಧ ಕಾನೂನು ಹೋರಾಟ ನಡೆಸುವುದರ ಜೊತೆಗೆ ಚುನಾವಣಾ ಆಯೋಗಕ್ಕೂ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...