alex Certify BIG BREAKING: 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ, ಮಾರ್ಗರೇಟ್ ಆಳ್ವಾಗೆ ಸೋಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ, ಮಾರ್ಗರೇಟ್ ಆಳ್ವಾಗೆ ಸೋಲು

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎನ್.ಡಿ.ಎ. ಅಭ್ಯರ್ಥಿ ಜಗದೀಪ್ ಧನಕರ್ ಗೆಲುವು ಸಾಧಿಸಿದ್ದಾರೆ. ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕರ್ನಾಟಕದ ಮಾರ್ಗರೇಟ್ ಆಳ್ವ ಸೋಲು ಕಂಡಿದ್ದಾರೆ.

ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಜಗದೀಪ್ ಧನಕರ್ ಅವರು 528 ಮತಗಳನ್ನು ಪಡೆದರು. ಚುನಾವಣೆಯಲ್ಲಿ ಎನ್‌.ಡಿ.ಎ. ಅಭ್ಯರ್ಥಿ ಜಗದೀಪ್ ಧನಕರ್ ನಿರೀಕ್ಷೆಗಿಂತಲೂ ಹೆಚ್ಚು 528 ಮತಗಳನ್ನು ಪಡೆದರೆ, ಮಾರ್ಗರೇಟ್ ಆಳ್ವ 128 ಮತಗಳನ್ನು ಪಡೆದರು. ಕನಿಷ್ಠ 15 ಮತಗಳು ಅಸಿಂಧುವಾಗಿವೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ 725 ಸಂಸದರು ಮತ ಚಲಾಯಿಸಿದ್ದರು. ಅನಾರೋಗ್ಯದ ಕಾರಣ ಬಿಜೆಪಿ ಸಂಸದರಾದ ಸನ್ನಿ ಡಿಯೋಲ್, ಸಂಜೆಯ ಧೋತ್ರೆ ಮತದಾನ ಮಾಡಿರಲಿಲ್ಲ. ತೃಣಮೂಲ ಕಾಂಗ್ರೆಸ್ ಪಕ್ಷ ಮತದಾನ ಮಾಡದಿರಲು ನಿರ್ಧರಿಸಿತ್ತು. ಪಕ್ಷದ ನಿರ್ಣಯವನ್ನು ಧಿಕ್ಕರಿಸಿ ಶಿಶಿರ್ ಮತ್ತು ದಿಬೆಂದು ಅಧಿಕಾರಿ ಮತದಾನ ಮಾಡಿದ್ದರು. 34 ಸಂಸದರು ಮತದಾನದಿಂದ ದೂರ ಉಳಿದಿದ್ದರು.

ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದ ಜಗದೀಪ್ ಧನಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಅಭಿನಂದಿಸಿದ್ದಾರೆ.

ಹಾಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಅಧಿಕಾರವಧಿ ಆಗಸ್ಟ್ 10 ರಂದು ಮುಕ್ತಾಯವಾಗಲಿದೆ. ಆ. 11 ರಂದು ನೂತನ ಉಪರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...