alex Certify BIG NEWS: ಧಾರ್ಮಿಕ ಸ್ಥಳಗಳ ಬಳಿ ಇರುವ ಮಾಂಸಾಹಾರ ಮಳಿಗೆಗಳು ಸದ್ಯದಲ್ಲೇ ಬಂದ್ ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧಾರ್ಮಿಕ ಸ್ಥಳಗಳ ಬಳಿ ಇರುವ ಮಾಂಸಾಹಾರ ಮಳಿಗೆಗಳು ಸದ್ಯದಲ್ಲೇ ಬಂದ್ ?

ದೆಹಲಿಯ ಧಾರ್ಮಿಕ ಸ್ಥಳಗಳ ಸನಿಹದಲ್ಲಿ ಮಾಂಸಾಹಾರವನ್ನು ಮಾರಾಟ ಮಾಡುವುದಾಗಲೀ ಅಥವಾ ವಿತರಣೆ ಮಾಡುತ್ತಿರುವ ಬಗ್ಗೆ ಹೊಸ ದೆಹಲಿ ಮುನ್ಸಿಪಲ್ ಕೌನ್ಸಿಲ್ ಸಮೀಕ್ಷೆ ನಡೆಸಲಿದೆ.

ಮಂಡಳಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಶ್ರೀ ವೆಂಕಟೇಶ್ವರ ಸ್ವಾಮಿ-ತಿರುಪತಿ ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ದೇವಾಲಯದ ಸಮೀಪದಲ್ಲೆ ಕೆಲವು ಮಳಿಗೆಗಳವರು ಮಾಂಸಾಹಾರವನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇಂತಹ ಮಾಂಸಾಹಾರ ಮಾರಾಟ ಮಾಡುವ ಮಳಿಗೆಗಳನ್ನು ಸ್ಥಳಾಂತರ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎನ್ ಡಿ ಎಂ ಸಿ ಉಪಾಧ್ಯಕ್ಷ ಸತೀಶ್ ಉಪಾಧ್ಯಾಯ ಅವರು, ನಾವು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಾಲಯಕ್ಕೆ ಹೊಂದಿಕೊಂಡಂತಿರುವ ಕೆಲವು ಮಳಿಗೆಯವರು ಮಾಂಸಾಹಾರವನ್ನು ಮಾರಾಟ ಮಾಡುತ್ತಿರುವುದನ್ನು ಗಮನಿಸಿದೆವು. ಇಂತಹ ಪ್ರಕ್ರಿಯೆಗಳನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...