alex Certify ನೇತ್ರ‍ಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೇತ್ರ‍ಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ಕಾಸರಗೋಡು: ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ.

ದುಷ್ಕರ್ಮಿಗಳು ಎಕ್ಸ್ ಪ್ರೆಸ್ ರೈಲಿನ ಎಸ್ 2 ಕೋಚ್ ಗೆ ಕಲ್ಲು ತೂರಿದ್ದಾರೆ. ಪರಿಣಾಮ ರೈಲಿನ ಬಾಗಿಲಿನ ಗಾಜು ಪುಡಿ ಪುಡಿಯಾಗಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.

ಕುಂಬ್ಳೆ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.

ಕೇರಳದ ಕೆಲವೆಡೆಗಳಲ್ಲಿ ಇತ್ತೀಚೆಗೆ ರೈಲುಗಳ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹೆಚ್ಚುತ್ತಿದ್ದು, ಇಂತಹ ದಾಳಿ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸುತ್ತಿರುವಗಲೇ ಕಾಸರಗೋಡಿನಲ್ಲಿ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲುತೂರಾಟ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...