alex Certify ಆಕ್ರಂದನ ಕೇಳಿ ಪಾಳು ಬಾವಿಯಲ್ಲಿ ಇಣುಕಿದ ದಾರಿಹೋಕರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಕ್ರಂದನ ಕೇಳಿ ಪಾಳು ಬಾವಿಯಲ್ಲಿ ಇಣುಕಿದ ದಾರಿಹೋಕರಿಗೆ ಬಿಗ್ ಶಾಕ್

ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಂದ್ರೇ ಗ್ರಾಮದ ಪಾಳುಬಾವಿಯಲ್ಲಿ ನವಜಾತ ಗಂಡು ಶಿಶು ಪತ್ತೆಯಾಗಿದೆ.

ರಸ್ತೆ ಸಮೀಪವೇ ಇರುವ ಸುಮಾರು 30 ಅಡಿ ಆಳದ ಪಾಳು ಬಾವಿಗೆ ಶಿಶುವನ್ನು ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಾವಿಯಿಂದ ಶಿಶುವಿನ ಆಕ್ರಂದನ ಕೇಳಿದ ದಾರಿಹೋಕರು ನೋಡಿದಾಗ ನವಜಾತ ಗಂಡು ಶಿಶು ಇರುವುದು ಕಂಡು ಬಂದಿದೆ. ಕೂಡಲೇ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಬಂದು ನವಜಾತ ಶಿಶುವನ್ನು ರಕ್ಷಣೆ ಮಾಡಿದ್ದಾರೆ.

ಶಿಶುವಿನ ದೇಹದ ಭಾಗಗಳಿಗೆ ಇರುವೆ ಕಚ್ಚಿವೆ. ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮಂಡ್ಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಸ ಕಡ್ಡಿಗಳ ರಾಶಿಯೇ ತುಂಬಿದ್ದ ಪಾಳು ಬಾವಿಯಲ್ಲಿ ನವಜಾತ ಗಂಡು ಶಿಶುವನ್ನು ಎಸೆಯಲಾಗಿದೆ. ಇಂತಹ ಕೃತ್ಯವೆಸಗಿದ ತಾಯಿಗೆ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.ಪಾಂಡವಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...