alex Certify ಪಂಚಮಸಾಲಿ ಮೀಸಲಾತಿಗೆ ಪರ್ಯಾಯ ಮಾರ್ಗ: ಹೊಸ ಪ್ರವರ್ಗ ರಚನೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚಮಸಾಲಿ ಮೀಸಲಾತಿಗೆ ಪರ್ಯಾಯ ಮಾರ್ಗ: ಹೊಸ ಪ್ರವರ್ಗ ರಚನೆ…?

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪರ್ಯಾಯ ಮಾರ್ಗದ ಬಗ್ಗೆ ಹಿಂದುಳಿದ ವರ್ಗಗಳ ಆಯೋಗ ಸಲಹೆ ನೀಡಿದೆ ಎನ್ನಲಾಗಿದೆ.

ಹೊಸ ಪ್ರವರ್ಗ ರಚಿಸಿ ಅದರಲ್ಲಿ ಅವಕಾಶ ನೀಡುವಂತೆ ಮಧ್ಯಂತರ ವರದಿಯಲ್ಲಿ ಉಲ್ಲೇಖವಿದೆ. ಆ ಪ್ರವರ್ಗಕ್ಕೆ ಮೀಸಲಾತಿ ನೀಡುವಾಗ ಜನಸಂಖ್ಯೆ ಆಧಾರಿತವಾಗಿರುತ್ತದೆ. ಮೀಸಲಾತಿ ಪಡೆಯುತ್ತಿರುವ ಸಮುದಾಯದಿಂದ ತೆಗೆದು ಹೊಸ ಪ್ರವರ್ಗಕ್ಕೆ ಹಂಚುವಂತೆ ಸಲಹೆ ನೀಡಲಾಗಿದೆ ಎನ್ನಲಾಗಿದೆ.

ಪರ್ಯಾಯ ಮಾರ್ಗದ ಬಗ್ಗೆ ಹಿಂದುಳಿದ ವರ್ಗಗಳ ಆಯೋಗ ಸಲಹೆ ನೀಡಿದೆ. ಡಿಸೆಂಬರ್ 28ರಂದು ಮುಖ್ಯಮಂತ್ರಿಗಳು ಸರ್ವ ಪಕ್ಷ ಸಭೆ ನಡೆಸುವ ಸಾಧ್ಯತೆ ಇದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಧ್ಯಂತರ ವರದಿ ಸಲ್ಲಿಸಿದ್ದರು‌.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...