alex Certify BREAKING: ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 18ಕ್ಕೆ ಏರಿಕೆ, 10 ಲಕ್ಷ ರೂ. ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 18ಕ್ಕೆ ಏರಿಕೆ, 10 ಲಕ್ಷ ರೂ. ಪರಿಹಾರ ಘೋಷಣೆ

ನವದೆಹಲಿ: ನವದೆಹಲಿ ರೈಲು ನಿಲ್ದಾಣದಲ್ಲಿ 14 ಮತ್ತು 15ನೇ ಪ್ಲಾಟ್‌ಫಾರ್ಮ್‌ನಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ಮೂವರು ಮಕ್ಕಳು ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ.

ಭಾರೀ ಜನಸಂದಣಿಯನ್ನು ಪರಿಗಣಿಸಿ, ನಾಲ್ಕು ಹೆಚ್ಚುವರಿ ರೈಲುಗಳನ್ನು ಘೋಷಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.ಕಾಲ್ತುಳಿತದ ಕಾರಣವನ್ನು ಖಚಿತಪಡಿಸಿಕೊಳ್ಳಲು ರೈಲ್ವೆ ಇಬ್ಬರು ಸದಸ್ಯರ ವಿಚಾರಣೆಗೆ ಆದೇಶಿಸಿದೆ.

ಸಾವು ಕಂಡವರನ್ನು ಆಹಾ ದೇವಿ(79), ಪಿಂಕಿ ದೇವಿ(41), ಶೀಲಾ ದೇವಿ(50), ವ್ಯೋಮ್(25), ಪೂನಂ ದೇವಿ(40), ಲಲಿತಾ ದೇವಿ(35), ಸುರುಚಿ(11), ಕೃಷ್ಣ ದೇವಿ(40), ವಿಜಯ್ ಸಾಹ್(15), ನೀರಜ್(12), ಶಾಂತಿ ದೇವಿ(40), ಪೂಜಾ ಕುಮಾರ್(8), ಸಂಗೀತಾ ಮಲಿಕ್, ಪೂನಂ ಇಬ್ಬರೂ 34 ವರ್ಷ, ಮಮತಾ ಝಾ(40), ರಿಯಾ ಸಿಂಗ್(7) ಬೇಬಿ ಕುಮಾರಿ(24) ಮತ್ತು ಮನೋಜ್(47) ಎಂದು ಗುರುತಿಸಲಾಗಿದೆ.

ಪರಿಹಾರ ಘೋಷಣೆ

ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ಸಂಬಂಧಿಕರಿಗೆ ಸರ್ಕಾರ 10 ಲಕ್ಷ ರೂಪಾಯಿಗಳ ಪರಿಹಾರವನ್ನು ರೈಲ್ವೇ ಘೋಷಿಸಿದೆ. ಇದಲ್ಲದೆ, ಗಾಯಾಳುಗಳಿಗೆ 2.5 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...